ತ್ವರಿತವಾಗಿ ಮತ್ತು ಹೆಚ್ಚಿನ ಜನರನ್ನು ಆರೋಗ್ಯ ತಪಾಸಣೆ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಲು ಬಿಬಿಎಂಪಿ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಬರಲು ಹಿಂದೇಟು ಹಾಕಿದ್ದರಿಂದ,ಏಳು ಮಂದಿಯ ವೈದ್ಯಕೀಯ ತಂಡಕ್ಕೆ ಪಾದರಾಯನಪುರದಲ್ಲಿಯೇ ತರಬೇತಿ ನೀಡಿ ಮಾದರಿ ಸಂಗ್ರಹಿಸುವ ಕಾರ್ಯಕ್ಕೆ ನಿಯೋಜಿಸಲಾಗಿದೆ.