ಪಾದರಾಯನಪುರದ 11 ರಸ್ತೆಗಳಿಗೆ ಸಮಾಜ ಸೇವಕರ ಹೆಸರು ಇಡುವ ಬಗ್ಗೆ ಬಿಬಿಎಂಪಿಯ ಸೆ.8ರ ಸಾಮಾನ್ಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಅದರಂತೆ ಬಿಬಿಎಂಪಿಯು ಡಿ.16ರಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಆದರೆ, ಈ ಪ್ರದೇಶದ ಎಲ್ಲ ರಸ್ತೆಗಳಿಗೆ ಮುಸ್ಲಿಂ ಮುಖಂಡರ ಹೆಸರು ಮಾತ್ರ ಇಟ್ಟಿರುವುದು ಸರಿಯಲ್ಲ ಎಂದು ಸಂಸದರಾದ ಅನಂತಕುಮಾರ್ ಹೆಗಡೆ, ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯ ಅನೇಕರ ನಾಯಕರು ಹೇಳಿದ್ದಾರೆ.