ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದರಾಯನಪುರ ಗಲಭೆ: 126 ಆರೋಪಿಗಳಿಗೆ ಜಾಮೀನು

Last Updated 29 ಮೇ 2020, 18:43 IST
ಅಕ್ಷರ ಗಾತ್ರ

ಬೆಂಗಳೂರು:ಪಾದರಾಯನಪುರದಲ್ಲಿ ಕೊರೊನಾ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ
ಶುಕ್ರವಾರ ಪ್ರಕಟಿಸಿದೆ.

‘ಎಲ್ಲರಿಗೂ ಕೋವಿಡ್-19 ಪರೀಕ್ಷೆ ನಡೆಸಬೇಕು. ಕೊರೊನಾ ಪಾಸಿಟಿವ್ ಇರುವವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಎಲ್ಲ ಆರೋಪಿಗಳೂ ಕೋವಿಡ್-19ರ ಮಾರ್ಗಸೂಚಿ ಪಾಲಿಸಬೇಕು. ಇಲ್ಲವಾದರೆ ಜಾಮೀನು ರದ್ದುಪಡಿಸಲಾಗುವುದು’ ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT