<p><strong>ಬೆಂಗಳೂರು: </strong>ನಗರದಲ್ಲಿ ಸೋಮವಾರ ಇಡೀ ರಾತ್ರಿ ಮಳೆ ಸುರಿದಿದ್ದು, ಇದೇ ಸಂದರ್ಭದಲ್ಲಿ ಕೆ.ಪಿ.ಅಗ್ರಹಾರದ ಮನೆಯೊಂದರಲ್ಲಿ ವಿದ್ಯುತ್ ತಗುಲಿ ವೆಂಕಟೇಶ್ ಎಂಬುವರು ಮೃತಪಟ್ಟಿದ್ದಾರೆ.</p>.<p>‘ಪೇಂಟರ್ ಆಗಿದ್ದ ವೆಂಕಟೇಶ್, 8ನೇ ಅಡ್ಡರಸ್ತೆಯಲ್ಲಿರುವ ಮನೆಯಲ್ಲಿ ಪತ್ನಿ ಜೊತೆ ವಾಸವಿದ್ದರು. ಪತ್ನಿ ಸಹ ಟೈಲರಿಂಗ್ ಕೆಲಸ ಮಾಡುತ್ತಿದ್ದರು. ಇಬ್ಬರೂ ನಿತ್ಯವೂ ಕೆಲಸಕ್ಕೆ ಹೊರಗಡೆ ಹೋಗುತ್ತಿದ್ದರು. ರಾತ್ರಿಯೇ ವಾಪಸು ಬರುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಸೋಮವಾರ ಮಳೆ ಜೋರಾಗಿತ್ತು. ದಂಪತಿ ರಾತ್ರಿ ಮನೆಗೆ ಬಂದಿದ್ದಾಗ, ಮನೆಯಲ್ಲೆಲ್ಲ ನೀರು ನುಗ್ಗಿತ್ತು. ವಿದ್ಯುತ್ ಸಹ ಇರಲಿಲ್ಲ. ಮಳೆ ನೀರು ನೋಡಿದ್ದ ದಂಪತಿ, ಮೊಬೈಲ್ ದೀಪದ ಬೆಳಕಿನಲ್ಲಿ ನೀರು ತೆರವು ಮಾಡಲಾರಂಭಿಸಿದ್ದರು. ಇದೇ ಸಂದರ್ಭದಲ್ಲಿ ಇಡೀ ಪ್ರದೇಶದಲ್ಲಿ ವಿದ್ಯುತ್ ಬಂದಿತ್ತು.’</p>.<p>‘ವಿದ್ಯುತ್ ದೀಪ ಆನ್ ಮಾಡಲೆಂದು ವೆಂಕಟೇಶ್, ಸ್ವಿಚ್ ಬೋರ್ಡ್ ಕಡೆ ಹೋಗಿ ಮುಟ್ಟಿದ್ದರು. ಇದೇ ಸಂದರ್ಭದಲ್ಲೇ ವಿದ್ಯುತ್ ತಗುಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಗಾಬರಿಗೊಂಡ ಪತ್ನಿ, ಸಹಾಯಕ್ಕಾಗಿ ಚೀರಾಡಿದ್ದರು. ಸ್ಥಳೀಯರು ಸಹಾಯಕ್ಕೆ ಬರುವಷ್ಟರಲ್ಲಿ ವೆಂಕಟೇಶ್ ಮೃತಪಟ್ಟಿದ್ದರು’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಸೋಮವಾರ ಇಡೀ ರಾತ್ರಿ ಮಳೆ ಸುರಿದಿದ್ದು, ಇದೇ ಸಂದರ್ಭದಲ್ಲಿ ಕೆ.ಪಿ.ಅಗ್ರಹಾರದ ಮನೆಯೊಂದರಲ್ಲಿ ವಿದ್ಯುತ್ ತಗುಲಿ ವೆಂಕಟೇಶ್ ಎಂಬುವರು ಮೃತಪಟ್ಟಿದ್ದಾರೆ.</p>.<p>‘ಪೇಂಟರ್ ಆಗಿದ್ದ ವೆಂಕಟೇಶ್, 8ನೇ ಅಡ್ಡರಸ್ತೆಯಲ್ಲಿರುವ ಮನೆಯಲ್ಲಿ ಪತ್ನಿ ಜೊತೆ ವಾಸವಿದ್ದರು. ಪತ್ನಿ ಸಹ ಟೈಲರಿಂಗ್ ಕೆಲಸ ಮಾಡುತ್ತಿದ್ದರು. ಇಬ್ಬರೂ ನಿತ್ಯವೂ ಕೆಲಸಕ್ಕೆ ಹೊರಗಡೆ ಹೋಗುತ್ತಿದ್ದರು. ರಾತ್ರಿಯೇ ವಾಪಸು ಬರುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಸೋಮವಾರ ಮಳೆ ಜೋರಾಗಿತ್ತು. ದಂಪತಿ ರಾತ್ರಿ ಮನೆಗೆ ಬಂದಿದ್ದಾಗ, ಮನೆಯಲ್ಲೆಲ್ಲ ನೀರು ನುಗ್ಗಿತ್ತು. ವಿದ್ಯುತ್ ಸಹ ಇರಲಿಲ್ಲ. ಮಳೆ ನೀರು ನೋಡಿದ್ದ ದಂಪತಿ, ಮೊಬೈಲ್ ದೀಪದ ಬೆಳಕಿನಲ್ಲಿ ನೀರು ತೆರವು ಮಾಡಲಾರಂಭಿಸಿದ್ದರು. ಇದೇ ಸಂದರ್ಭದಲ್ಲಿ ಇಡೀ ಪ್ರದೇಶದಲ್ಲಿ ವಿದ್ಯುತ್ ಬಂದಿತ್ತು.’</p>.<p>‘ವಿದ್ಯುತ್ ದೀಪ ಆನ್ ಮಾಡಲೆಂದು ವೆಂಕಟೇಶ್, ಸ್ವಿಚ್ ಬೋರ್ಡ್ ಕಡೆ ಹೋಗಿ ಮುಟ್ಟಿದ್ದರು. ಇದೇ ಸಂದರ್ಭದಲ್ಲೇ ವಿದ್ಯುತ್ ತಗುಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಗಾಬರಿಗೊಂಡ ಪತ್ನಿ, ಸಹಾಯಕ್ಕಾಗಿ ಚೀರಾಡಿದ್ದರು. ಸ್ಥಳೀಯರು ಸಹಾಯಕ್ಕೆ ಬರುವಷ್ಟರಲ್ಲಿ ವೆಂಕಟೇಶ್ ಮೃತಪಟ್ಟಿದ್ದರು’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>