<p><strong>ಬೆಂಗಳೂರು</strong>: ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆ ವಿಸ್ತರಿಸಲು ಬಿಬಿಎಂಪಿ ಸಿಬ್ಬಂದಿ ಅರಮನೆ ಮೈದಾನದಲ್ಲಿನ 15 ಎಕರೆ 39 ಗುಂಟೆ ಭೂಮಿಯ ಸರ್ವೆ ನಡೆಸಿದರು.</p>.<p>ಸರಿಯಾದ ವಿಸ್ತೀರ್ಣ ವರದಿ (ಸಿಡಿಆರ್)ಯನ್ನು ಸಿದ್ಧಪಡಿಸಲು ಈ ಸರ್ವೆ ಕೈಗೊಳ್ಳಲಾಯಿತು. ಇದು ಎಷ್ಟು ಭೂಮಿಗೆ ಪರಿಹಾರ ನೀಡಬೇಕು ಎಂಬುದನ್ನು ನಿರ್ಧರಿಸಲು ಸಹಕಾರಿಯಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಬಿಎಂಪಿ ಅಧಿಕಾರಿಗಳು ಇತರೆ ಇಲಾಖೆಗಳ ಸಿಬ್ಬಂದಿಯೊಂದಿಗೆ ಸರ್ವೆ ಉಪಕರಣಗಳೊಂದಿಗೆ ಸಮೀಕ್ಷೆ ನಡೆಸಿದರು. ‘ಅರಮನೆ ಅಡ್ಡರಸ್ತೆ ಹಾಗೂ ಮೇಖ್ರಿ ವೃತ್ತದ ಅಂಡರ್ಪಾಸ್ ನಿರ್ಮಾಣಕ್ಕಾಗಿ ಈ ಹಿಂದೆ ಅರಮನೆ ಮೈದಾನವನ್ನು ಎರಡು ಬಾರಿ ಉಪಯೋಗಿಸಿಕೊಳ್ಳಲಾಗಿದೆ. ಇದೀಗ ನಾವು ಕಾಂಪೌಂಡ್ನಿಂದ ರಸ್ತೆವರೆಗಿರುವ ಖಾಲಿ ಭೂಮಿಯನ್ನು ನಾವು ಅಳತೆ ಮಾಡುತ್ತಿದ್ದೇವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಗೊಂಡ ನಿವೇಶನಗಳ ಸ್ವಾಧೀನ ನೀಡುವ ಮುನ್ನ ಸಿಡಿಆರ್ ಮೂಲಕ ವರದಿಗಳನ್ನು ತಯಾರಿಸುತ್ತದೆ. ಅದರಂತೆ ಬಿಬಿಎಂಪಿ ಅರಮನೆ ಮೈದಾನದ ಭೂಮಿಯ ಸರ್ವೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆ ವಿಸ್ತರಿಸಲು ಬಿಬಿಎಂಪಿ ಸಿಬ್ಬಂದಿ ಅರಮನೆ ಮೈದಾನದಲ್ಲಿನ 15 ಎಕರೆ 39 ಗುಂಟೆ ಭೂಮಿಯ ಸರ್ವೆ ನಡೆಸಿದರು.</p>.<p>ಸರಿಯಾದ ವಿಸ್ತೀರ್ಣ ವರದಿ (ಸಿಡಿಆರ್)ಯನ್ನು ಸಿದ್ಧಪಡಿಸಲು ಈ ಸರ್ವೆ ಕೈಗೊಳ್ಳಲಾಯಿತು. ಇದು ಎಷ್ಟು ಭೂಮಿಗೆ ಪರಿಹಾರ ನೀಡಬೇಕು ಎಂಬುದನ್ನು ನಿರ್ಧರಿಸಲು ಸಹಕಾರಿಯಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಬಿಎಂಪಿ ಅಧಿಕಾರಿಗಳು ಇತರೆ ಇಲಾಖೆಗಳ ಸಿಬ್ಬಂದಿಯೊಂದಿಗೆ ಸರ್ವೆ ಉಪಕರಣಗಳೊಂದಿಗೆ ಸಮೀಕ್ಷೆ ನಡೆಸಿದರು. ‘ಅರಮನೆ ಅಡ್ಡರಸ್ತೆ ಹಾಗೂ ಮೇಖ್ರಿ ವೃತ್ತದ ಅಂಡರ್ಪಾಸ್ ನಿರ್ಮಾಣಕ್ಕಾಗಿ ಈ ಹಿಂದೆ ಅರಮನೆ ಮೈದಾನವನ್ನು ಎರಡು ಬಾರಿ ಉಪಯೋಗಿಸಿಕೊಳ್ಳಲಾಗಿದೆ. ಇದೀಗ ನಾವು ಕಾಂಪೌಂಡ್ನಿಂದ ರಸ್ತೆವರೆಗಿರುವ ಖಾಲಿ ಭೂಮಿಯನ್ನು ನಾವು ಅಳತೆ ಮಾಡುತ್ತಿದ್ದೇವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಗೊಂಡ ನಿವೇಶನಗಳ ಸ್ವಾಧೀನ ನೀಡುವ ಮುನ್ನ ಸಿಡಿಆರ್ ಮೂಲಕ ವರದಿಗಳನ್ನು ತಯಾರಿಸುತ್ತದೆ. ಅದರಂತೆ ಬಿಬಿಎಂಪಿ ಅರಮನೆ ಮೈದಾನದ ಭೂಮಿಯ ಸರ್ವೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>