<p><strong>ಬೆಂಗಳೂರು</strong>: ‘ರೋಗಿಗಳ ನೋವು ನಿರ್ವಹಣೆಗೆ ಸಹಕಾರಿಯಾದ ಉಪಶಮನ ಆರೈಕೆಗೆ ಹೆಚ್ಚಿನ ಬೇಡಿಕೆಯಿದ್ದು, ಈ ಆರೈಕೆ ಬಗ್ಗೆ ಜಾಗೃತಿ ಮೂಡಿಸಬೇಕಿದೆ’ ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಔಷಧ ಮತ್ತು ವೈದ್ಯಕೀಯ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ ಕ್ಯಾಮರಾ ವಾನ್ ಬ್ರೀಮನ್ ಅಭಿಪ್ರಾಯಪಟ್ಟರು.</p>.<p>ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ನಗರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕ್ಯಾನ್ಸರ್ ಹಾಗೂ ಮಕ್ಕಳ ಉಪಶಮನ ಆರೈಕೆ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ, ಮಾತನಾಡಿದರು. </p>.<p>‘ಕ್ಯಾನ್ಸರ್ನಂತಹ ಗಂಭೀರ ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ನೋವಿನ ನಿರ್ವಹಣೆಯ ಜತೆಗೆ, ಜೀವನದ ಗುಣಮಟ್ಟ ಸುಧಾರಿಸಲು ಉಪಶಮನ ಆರೈಕೆ ಸಹಕಾರಿಯಾಗಲಿದೆ’ ಎಂದರು.</p>.<p>ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ಟಿ. ನವೀನ್, ‘ಸಂಸ್ಥೆಯಲ್ಲಿರುವ ಉಪಶಮನ ಆರೈಕೆ ವಿಭಾಗದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಭಾಗವು ಕ್ಯಾನ್ಸರ್ ಕೇಂದ್ರಗಳಿಗೆ ಆಧಾರ ಸ್ತಂಭದಂತಿದ್ದು, ರೋಗಿಗಳಿಗೆ ನೋವು ಹಾಗೂ ಮಾನಸಿಕ ಒತ್ತಡ ನಿವಾರಣೆಗೆ ಈ ಆರೈಕೆ ವಿಭಾಗ ನೆರವಾಗಿದೆ’ ಎಂದರು. </p>.<p>ಸಂಸ್ಥೆಯ ಉಪಶಮನ ಆರೈಕೆ ವಿಭಾಗದ ಮುಖ್ಯಸ್ಥ ಡಾ.ಯದುರಾಜ್, ‘ಉಪಶಮನ ಆರೈಕೆಯಲ್ಲಿ ಅನುಸರಿಸಬೇಕಾದ ಕ್ರಮ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ಅರಿವು ಮೂಡಿಸುವುದು ಕಾರ್ಯಾಗಾರದ ಉದ್ದೇಶ’ ಎಂದು ಹೇಳಿದರು. </p>.<p>ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯೆ ಡಾ. ಅನುರಾಧ, ‘ರೋಗಿಗೆ ಪೂರ್ಣಪ್ರಮಾಣದ ಚಿಕಿತ್ಸೆ ನೀಡುವಲ್ಲಿ ಈ ಆರೈಕೆ ಪ್ರಮುಖಪಾತ್ರ ವಹಿಸುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರೋಗಿಗಳ ನೋವು ನಿರ್ವಹಣೆಗೆ ಸಹಕಾರಿಯಾದ ಉಪಶಮನ ಆರೈಕೆಗೆ ಹೆಚ್ಚಿನ ಬೇಡಿಕೆಯಿದ್ದು, ಈ ಆರೈಕೆ ಬಗ್ಗೆ ಜಾಗೃತಿ ಮೂಡಿಸಬೇಕಿದೆ’ ಎಂದು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ ಔಷಧ ಮತ್ತು ವೈದ್ಯಕೀಯ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ ಕ್ಯಾಮರಾ ವಾನ್ ಬ್ರೀಮನ್ ಅಭಿಪ್ರಾಯಪಟ್ಟರು.</p>.<p>ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ನಗರದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕ್ಯಾನ್ಸರ್ ಹಾಗೂ ಮಕ್ಕಳ ಉಪಶಮನ ಆರೈಕೆ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ, ಮಾತನಾಡಿದರು. </p>.<p>‘ಕ್ಯಾನ್ಸರ್ನಂತಹ ಗಂಭೀರ ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ನೋವಿನ ನಿರ್ವಹಣೆಯ ಜತೆಗೆ, ಜೀವನದ ಗುಣಮಟ್ಟ ಸುಧಾರಿಸಲು ಉಪಶಮನ ಆರೈಕೆ ಸಹಕಾರಿಯಾಗಲಿದೆ’ ಎಂದರು.</p>.<p>ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ಟಿ. ನವೀನ್, ‘ಸಂಸ್ಥೆಯಲ್ಲಿರುವ ಉಪಶಮನ ಆರೈಕೆ ವಿಭಾಗದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಭಾಗವು ಕ್ಯಾನ್ಸರ್ ಕೇಂದ್ರಗಳಿಗೆ ಆಧಾರ ಸ್ತಂಭದಂತಿದ್ದು, ರೋಗಿಗಳಿಗೆ ನೋವು ಹಾಗೂ ಮಾನಸಿಕ ಒತ್ತಡ ನಿವಾರಣೆಗೆ ಈ ಆರೈಕೆ ವಿಭಾಗ ನೆರವಾಗಿದೆ’ ಎಂದರು. </p>.<p>ಸಂಸ್ಥೆಯ ಉಪಶಮನ ಆರೈಕೆ ವಿಭಾಗದ ಮುಖ್ಯಸ್ಥ ಡಾ.ಯದುರಾಜ್, ‘ಉಪಶಮನ ಆರೈಕೆಯಲ್ಲಿ ಅನುಸರಿಸಬೇಕಾದ ಕ್ರಮ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ಅರಿವು ಮೂಡಿಸುವುದು ಕಾರ್ಯಾಗಾರದ ಉದ್ದೇಶ’ ಎಂದು ಹೇಳಿದರು. </p>.<p>ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯೆ ಡಾ. ಅನುರಾಧ, ‘ರೋಗಿಗೆ ಪೂರ್ಣಪ್ರಮಾಣದ ಚಿಕಿತ್ಸೆ ನೀಡುವಲ್ಲಿ ಈ ಆರೈಕೆ ಪ್ರಮುಖಪಾತ್ರ ವಹಿಸುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>