<p><strong>ಬೆಂಗಳೂರು</strong>: ‘ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಕನ್ನಡದ ಆದಿಕವಿ ಪಂಪನ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳು ನಡೆಯುತ್ತಿವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಚಾವುಂಡರಾಯ ದತ್ತಿ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಸಾಹಿತ್ಯಕ್ಕೆ ಜೈನರು ಹಾಕಿಕೊಟ್ಟ ಭದ್ರ ಬುನಾದಿಯ ಮೇಲೆ ನಮ್ಮ ಭವ್ಯ ಸಾಹಿತ್ಯ ಸೌಧ ನಿರ್ಮಾಣಗೊಂಡಿದೆ’ ಎಂದು ಶ್ಲಾಘಿಸಿದರು.</p>.<p>‘ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಜೈನರ ಪ್ರಮಾಣ ಶೇ 1ಕ್ಕಿಂತ ಕಡಿಮೆ ಇರಬಹುದು. ಆದರೆ, ಪ್ರಾಚೀನ ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಸಂಖ್ಯೆಯಲ್ಲಿ ಮಾತ್ರವಲ್ಲದೇ, ಗುಣಮಟ್ಟದಲ್ಲೂ ಬಹಳ ದೊಡ್ಡದು. ಆ ಕೊಡುಗೆ ಕನ್ನಡ ಸಾಹಿತ್ಯದ ಅರ್ಧ ಭಾಗವನ್ನು ಆವರಿಸಿಕೊಳ್ಳುತ್ತದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಹಂ.ಪ. ನಾಗರಾಜಯ್ಯ, ‘ಜೈನರಿಗೆ ಅಂತರಿಕ ಶೋಧದಷ್ಟೇ ಸಾಮಾಜಿಕ ಮುಖಗಳೂ ಮುಖ್ಯ. ಈ ಪುರಸ್ಕಾರ ಅದರ ಭಾಗ’ ಎಂದು ಹೇಳಿದರು.</p>.<p>‘ಚಾವುಂಡರಾಯ ದತ್ತಿ ಪ್ರಶಸ್ತಿ’ ಸ್ವೀಕರಿಸಿದ ಲೇಖಕಿ ಪ್ರೀತಿ ಶುಭಚಂದ್ರ ಮಾತನಾಡಿ, ‘ಪಂಪ, ರತ್ನಾಕರ ವರ್ಣಿ ಕಾವ್ಯದಲ್ಲಿ ಚಿತ್ರಿಸಿದ ಬಾಹುಬಲಿಯನ್ನು ಚಾವುಂಡರಾಯರು ಮೂರ್ತಿರೂಪಕ್ಕೆ ತಂದರು. ಅವರ ಹೆಸರಿನಲ್ಲಿನ ಈ ಪ್ರಶಸ್ತಿ ಧನ್ಯತೆಯನ್ನು ತಂದಿದೆ‘ ಎಂದು ಹೇಳಿದರು.</p>.<p>‘ಇತ್ತೀಚೆಗೆ ನಮ್ಮನ್ನು ಅಗಲಿದ ಸಾಹಿತಿ ಕಮಲಾ ಹಂಪನಾ ಅವರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ’ ಎಂದು ತಿಳಿಸಿದರು.</p>.<p>ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಸುರೇಂದ್ರ ಕುಮಾರ್, ನ್ಯೂಜರ್ಸಿಯ ಬೃಂದಾವನ ಕನ್ನಡ ಕೂಟದ ಸ್ಥಾಪಕ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿದರು.</p>.<p>ಕನಕಗಿರಿ ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ್, ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲ್ ಪಾಂಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಕನ್ನಡದ ಆದಿಕವಿ ಪಂಪನ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳು ನಡೆಯುತ್ತಿವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಚಾವುಂಡರಾಯ ದತ್ತಿ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡ ಸಾಹಿತ್ಯಕ್ಕೆ ಜೈನರು ಹಾಕಿಕೊಟ್ಟ ಭದ್ರ ಬುನಾದಿಯ ಮೇಲೆ ನಮ್ಮ ಭವ್ಯ ಸಾಹಿತ್ಯ ಸೌಧ ನಿರ್ಮಾಣಗೊಂಡಿದೆ’ ಎಂದು ಶ್ಲಾಘಿಸಿದರು.</p>.<p>‘ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಜೈನರ ಪ್ರಮಾಣ ಶೇ 1ಕ್ಕಿಂತ ಕಡಿಮೆ ಇರಬಹುದು. ಆದರೆ, ಪ್ರಾಚೀನ ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಸಂಖ್ಯೆಯಲ್ಲಿ ಮಾತ್ರವಲ್ಲದೇ, ಗುಣಮಟ್ಟದಲ್ಲೂ ಬಹಳ ದೊಡ್ಡದು. ಆ ಕೊಡುಗೆ ಕನ್ನಡ ಸಾಹಿತ್ಯದ ಅರ್ಧ ಭಾಗವನ್ನು ಆವರಿಸಿಕೊಳ್ಳುತ್ತದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಹಂ.ಪ. ನಾಗರಾಜಯ್ಯ, ‘ಜೈನರಿಗೆ ಅಂತರಿಕ ಶೋಧದಷ್ಟೇ ಸಾಮಾಜಿಕ ಮುಖಗಳೂ ಮುಖ್ಯ. ಈ ಪುರಸ್ಕಾರ ಅದರ ಭಾಗ’ ಎಂದು ಹೇಳಿದರು.</p>.<p>‘ಚಾವುಂಡರಾಯ ದತ್ತಿ ಪ್ರಶಸ್ತಿ’ ಸ್ವೀಕರಿಸಿದ ಲೇಖಕಿ ಪ್ರೀತಿ ಶುಭಚಂದ್ರ ಮಾತನಾಡಿ, ‘ಪಂಪ, ರತ್ನಾಕರ ವರ್ಣಿ ಕಾವ್ಯದಲ್ಲಿ ಚಿತ್ರಿಸಿದ ಬಾಹುಬಲಿಯನ್ನು ಚಾವುಂಡರಾಯರು ಮೂರ್ತಿರೂಪಕ್ಕೆ ತಂದರು. ಅವರ ಹೆಸರಿನಲ್ಲಿನ ಈ ಪ್ರಶಸ್ತಿ ಧನ್ಯತೆಯನ್ನು ತಂದಿದೆ‘ ಎಂದು ಹೇಳಿದರು.</p>.<p>‘ಇತ್ತೀಚೆಗೆ ನಮ್ಮನ್ನು ಅಗಲಿದ ಸಾಹಿತಿ ಕಮಲಾ ಹಂಪನಾ ಅವರಿಗೆ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ’ ಎಂದು ತಿಳಿಸಿದರು.</p>.<p>ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಸುರೇಂದ್ರ ಕುಮಾರ್, ನ್ಯೂಜರ್ಸಿಯ ಬೃಂದಾವನ ಕನ್ನಡ ಕೂಟದ ಸ್ಥಾಪಕ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿದರು.</p>.<p>ಕನಕಗಿರಿ ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ್, ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲ್ ಪಾಂಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>