<p><strong>ಬೆಂಗಳೂರು:</strong> ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆವರಣದಲ್ಲಿ ಸ್ಥಾಪಿಸಲಾಗುತ್ತಿರುವ ‘ಆದಿಕವಿ ಪಂಪನ ಪುತ್ಥಳಿ’ಯನ್ನು ಜುಲೈನಲ್ಲಿ ಅನಾವರಣಗೊಳಿಸಲಾಗುವುದು’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. </p>.<p>‘ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಪ್ರತಿಮೆ ಅನಾವರಣಗೊಳಿಸಲು ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲಿಯೇ ದಿನಾಂಕವನ್ನು ಗೊತ್ತುಪಡಿಸಲಾಗುವುದು. ಪುತ್ಥಳಿ ಅನಾವರಣ ದಿನದಂದು ಪಂಪನ ಕಾವ್ಯ ವಾಚನ, ವಿಶೇಷ ಉಪನ್ಯಾಸ, ವಿಚಾರಗೋಷ್ಠಿ ಸೇರಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದ್ದಾರೆ. </p>.<p>‘ಕನ್ನಡದ ಅನೇಕ ಕವಿಗಳು ಪಂಪನ ಪ್ರಭಾವಕ್ಕೆ ಒಳಗಾಗಿದ್ದಾರೆ. ಪಂಪನ ಪುತ್ಥಳಿಗೆ ಹೊಂದಿಕೊಂಡು ‘ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಸಾರ್ವಕಾಲಿಕ ಮಹತ್ವದ ಪಂಪವಾಣಿಯನ್ನೂ ಅಳವಡಿಸಿಲಾಗುವುದು. ಈ ಮೂಲಕ ಕನ್ನಡ ಸಾರಸ್ವತ ಪರಂಪರೆಯ ಹಿರಿಮೆಯನ್ನು ಗೌರವಿಸಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆವರಣದಲ್ಲಿ ಸ್ಥಾಪಿಸಲಾಗುತ್ತಿರುವ ‘ಆದಿಕವಿ ಪಂಪನ ಪುತ್ಥಳಿ’ಯನ್ನು ಜುಲೈನಲ್ಲಿ ಅನಾವರಣಗೊಳಿಸಲಾಗುವುದು’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. </p>.<p>‘ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಪ್ರತಿಮೆ ಅನಾವರಣಗೊಳಿಸಲು ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲಿಯೇ ದಿನಾಂಕವನ್ನು ಗೊತ್ತುಪಡಿಸಲಾಗುವುದು. ಪುತ್ಥಳಿ ಅನಾವರಣ ದಿನದಂದು ಪಂಪನ ಕಾವ್ಯ ವಾಚನ, ವಿಶೇಷ ಉಪನ್ಯಾಸ, ವಿಚಾರಗೋಷ್ಠಿ ಸೇರಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದ್ದಾರೆ. </p>.<p>‘ಕನ್ನಡದ ಅನೇಕ ಕವಿಗಳು ಪಂಪನ ಪ್ರಭಾವಕ್ಕೆ ಒಳಗಾಗಿದ್ದಾರೆ. ಪಂಪನ ಪುತ್ಥಳಿಗೆ ಹೊಂದಿಕೊಂಡು ‘ಮನುಷ್ಯ ಜಾತಿ ತಾನೊಂದೆ ವಲಂ’ ಎನ್ನುವ ಸಾರ್ವಕಾಲಿಕ ಮಹತ್ವದ ಪಂಪವಾಣಿಯನ್ನೂ ಅಳವಡಿಸಿಲಾಗುವುದು. ಈ ಮೂಲಕ ಕನ್ನಡ ಸಾರಸ್ವತ ಪರಂಪರೆಯ ಹಿರಿಮೆಯನ್ನು ಗೌರವಿಸಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>