<p><strong>ಬೆಂಗಳೂರು:</strong> ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ, ಸತ್ಯಾಗ್ರಹ ಸ್ಥಳದಲ್ಲಿಯೇ ಮಹಾಶಿವರಾತ್ರಿ ಆಚರಿಸಿದರು.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ಸ್ವಾಮೀಜಿ ಗುರುವಾರ ಸಾಮೂಹಿಕ ಇಷ್ಟಲಿಂಗ ಪೂಜೆಗೆ ಚಾಲನೆ ನೀಡಿದರು. ಧರಣಿ ಸ್ಥಳದಲ್ಲಿಯೇ ಶಿವಲಿಂಗ ಮೂರ್ತಿಯನ್ನು ಇಡಲಾಗಿತ್ತು. ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಭಜನೆ ಪದ, ಭಕ್ತಿಗೀತೆಗಳು, ಬಸವಣ್ಣನವರ ವಚನಗಳನ್ನು ಹೇಳುವ ಮೂಲಕ ಶಿವರಾತ್ರಿ ಆಚರಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಸ್ವಾಮೀಜಿ, ‘ಹಕ್ಕೊತ್ತಾಯ, ಪ್ರತಿಭಟನೆ, ಧಿಕ್ಕಾರಗಳಿಗೆ ಸಾಕ್ಷಿಯಾಗುತ್ತಿದ್ದ ಸ್ವಾತಂತ್ರ್ಯ ಉದ್ಯಾನವು ಇಂದು ಶಿವನಾಮ ಸ್ಮರಣೆಗೆ ಸಾಕ್ಷಿಯಾಗುತ್ತಿದೆ. ಫ್ರೀಡಂ ಪಾರ್ಕ್ ಈಗ ಕೂಡಲಸಂಗಮವಾಗಿ ಬದಲಾಗಿದೆ’ ಎಂದರು.</p>.<p>‘ಒಂದೆರಡು ದಿನ ಧರಣಿ ಮಾಡಿ ವಾಪಸ್ ಹೋಗುತ್ತಾರೆ ಎಂದು ಮುಖ್ಯಮಂತ್ರಿಯವರು ಎಂದುಕೊಂಡಿದ್ದರು. ಅವರು ನಡೆಸಿದ ಅಗ್ನಿ ಪರೀಕ್ಷೆಯಲ್ಲಿ ನಾವು ಗೆದ್ದಿದ್ದೇವೆ’ ಎಂದೂ ಹೇಳಿದರು.</p>.<p>‘ಮುಖ್ಯಮಂತ್ರಿಯವರು ನಮ್ಮ ಸಮುದಾಯದವರು ಎಂಬ ಖುಷಿ ಇತ್ತು. ನಮ್ಮವರೇ ನಮ್ಮನ್ನು 39 ದಿನಗಳ ಕಾಲ 712 ಕಿ.ಮೀ. ನಡೆಸಿದರು. 19 ದಿನಗಳಿಂದ ಧರಣಿ ಕೂರುವಂತೆ ಮಾಡಿದರು. ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದರು. ಈ ಎಲ್ಲ ಪರೀಕ್ಷೆಗಳನ್ನೂ ನಾವು ಗೆದ್ದಿದ್ದೇವೆ. ಪಂಚಮಸಾಲಿ ಸಮುದಾಯದ ಮಕ್ಕಳಿಗೆ ಶಿಕ್ಷಣ, ಯುವಸಮೂಹಕ್ಕೆ ಉದ್ಯೋಗದ ಮೀಸಲಾತಿ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ’ ಎಂದೂ ಹೇಳಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸದನದಲ್ಲಿ ಸೋಮವಾರ ಪಂಚಮಸಾಲಿ ಸಮುದಾಯದವರಿಗೆ 2ಎ ಮೀಸಲಾತಿ ಘೋಷಿಸಬೇಕು’ ಎಂದೂ ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ, ಸತ್ಯಾಗ್ರಹ ಸ್ಥಳದಲ್ಲಿಯೇ ಮಹಾಶಿವರಾತ್ರಿ ಆಚರಿಸಿದರು.</p>.<p>ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ಸ್ವಾಮೀಜಿ ಗುರುವಾರ ಸಾಮೂಹಿಕ ಇಷ್ಟಲಿಂಗ ಪೂಜೆಗೆ ಚಾಲನೆ ನೀಡಿದರು. ಧರಣಿ ಸ್ಥಳದಲ್ಲಿಯೇ ಶಿವಲಿಂಗ ಮೂರ್ತಿಯನ್ನು ಇಡಲಾಗಿತ್ತು. ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಭಜನೆ ಪದ, ಭಕ್ತಿಗೀತೆಗಳು, ಬಸವಣ್ಣನವರ ವಚನಗಳನ್ನು ಹೇಳುವ ಮೂಲಕ ಶಿವರಾತ್ರಿ ಆಚರಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಸ್ವಾಮೀಜಿ, ‘ಹಕ್ಕೊತ್ತಾಯ, ಪ್ರತಿಭಟನೆ, ಧಿಕ್ಕಾರಗಳಿಗೆ ಸಾಕ್ಷಿಯಾಗುತ್ತಿದ್ದ ಸ್ವಾತಂತ್ರ್ಯ ಉದ್ಯಾನವು ಇಂದು ಶಿವನಾಮ ಸ್ಮರಣೆಗೆ ಸಾಕ್ಷಿಯಾಗುತ್ತಿದೆ. ಫ್ರೀಡಂ ಪಾರ್ಕ್ ಈಗ ಕೂಡಲಸಂಗಮವಾಗಿ ಬದಲಾಗಿದೆ’ ಎಂದರು.</p>.<p>‘ಒಂದೆರಡು ದಿನ ಧರಣಿ ಮಾಡಿ ವಾಪಸ್ ಹೋಗುತ್ತಾರೆ ಎಂದು ಮುಖ್ಯಮಂತ್ರಿಯವರು ಎಂದುಕೊಂಡಿದ್ದರು. ಅವರು ನಡೆಸಿದ ಅಗ್ನಿ ಪರೀಕ್ಷೆಯಲ್ಲಿ ನಾವು ಗೆದ್ದಿದ್ದೇವೆ’ ಎಂದೂ ಹೇಳಿದರು.</p>.<p>‘ಮುಖ್ಯಮಂತ್ರಿಯವರು ನಮ್ಮ ಸಮುದಾಯದವರು ಎಂಬ ಖುಷಿ ಇತ್ತು. ನಮ್ಮವರೇ ನಮ್ಮನ್ನು 39 ದಿನಗಳ ಕಾಲ 712 ಕಿ.ಮೀ. ನಡೆಸಿದರು. 19 ದಿನಗಳಿಂದ ಧರಣಿ ಕೂರುವಂತೆ ಮಾಡಿದರು. ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದರು. ಈ ಎಲ್ಲ ಪರೀಕ್ಷೆಗಳನ್ನೂ ನಾವು ಗೆದ್ದಿದ್ದೇವೆ. ಪಂಚಮಸಾಲಿ ಸಮುದಾಯದ ಮಕ್ಕಳಿಗೆ ಶಿಕ್ಷಣ, ಯುವಸಮೂಹಕ್ಕೆ ಉದ್ಯೋಗದ ಮೀಸಲಾತಿ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ’ ಎಂದೂ ಹೇಳಿದರು.</p>.<p>‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸದನದಲ್ಲಿ ಸೋಮವಾರ ಪಂಚಮಸಾಲಿ ಸಮುದಾಯದವರಿಗೆ 2ಎ ಮೀಸಲಾತಿ ಘೋಷಿಸಬೇಕು’ ಎಂದೂ ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>