ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕೊಡುಗೆ ಶೂನ್ಯ. ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ವಿಚಾರದಲ್ಲಿ ಜನಪರ ಕೆಲಸ ಮಾಡಿಲ್ಲ. ಅಲ್ಲದೆ 2019ರಲ್ಲಿ ಇಡಬ್ಲ್ಯೂಎಸ್ ಕಾಯ್ದೆ ಜಾರಿಗೆ ತರುವ ಮೂಲಕ ಮೀಸಲಾತಿ ಉದ್ದೇಶದ ದಿಕ್ಕನ್ನು ತಪ್ಪಿಸಿದರು’ ಎಂದರು.