<p><strong>ಬೆಂಗಳೂರು:</strong> ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು, ಅದನ್ನು ವಾಪಸು ಪಡೆಯತ್ತಿದ್ದರೆ ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದೆ ನ್ಯಾಯಯುತವಾಗಿ ಮತ್ತು ಸ್ವ ಇಚ್ಛೆಯಿಂದ ಹಿಂಪಡೆಯುತ್ತಿದ್ದಾರೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳು ಹರಾಜು ಹಾಕುತ್ತಿರುವ ಆರೋಪಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಸೋಮವಾರ ವಿಡಿಯೊ ಸಂವಾದ ನಡೆಸಿದ ಆಯುಕ್ತರು, ‘ಅವಿರೋಧವಾಗಿ ಆಯ್ಕೆಯಾಗುವ ಪ್ರಕರಣಗಳನ್ನು ಒಮ್ಮೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು’ ಎಂದೂ ನಿರ್ದೇಶನ ನೀಡಿದ್ದಾರೆ.</p>.<p>‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು 1993 ನಿಯಮ 18ರಂತೆ ಉಮೇದುವಾರಿಕೆಯನ್ನು ಅಭ್ಯರ್ಥಿಯು ಖುದ್ದು ಅಥವಾ ಸೂಚಕರ ಮೂಲಕ ಅಥವಾ ಅಧಿಕೃತವಾಗಿ ನಿಯೋಜಿಸಿದ ಏಜೆಂಟ್ ಮೂಲಕ ಹಿಂತೆಗೆದುಕೊಳ್ಳಲು ಅವಕಾಶವಿದೆ. ಆದರೆ, ಈ ಸಂದರ್ಭದಲ್ಲಿ ಅಭ್ಯರ್ಥಿ ಯಾವುದೇ ಒತ್ತಡ ಇಲ್ಲದೆ ವಾಪಸು ಪಡೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದೂ ಆಯುಕ್ತರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು, ಅದನ್ನು ವಾಪಸು ಪಡೆಯತ್ತಿದ್ದರೆ ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದೆ ನ್ಯಾಯಯುತವಾಗಿ ಮತ್ತು ಸ್ವ ಇಚ್ಛೆಯಿಂದ ಹಿಂಪಡೆಯುತ್ತಿದ್ದಾರೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳು ಹರಾಜು ಹಾಕುತ್ತಿರುವ ಆರೋಪಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಸೋಮವಾರ ವಿಡಿಯೊ ಸಂವಾದ ನಡೆಸಿದ ಆಯುಕ್ತರು, ‘ಅವಿರೋಧವಾಗಿ ಆಯ್ಕೆಯಾಗುವ ಪ್ರಕರಣಗಳನ್ನು ಒಮ್ಮೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು’ ಎಂದೂ ನಿರ್ದೇಶನ ನೀಡಿದ್ದಾರೆ.</p>.<p>‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು 1993 ನಿಯಮ 18ರಂತೆ ಉಮೇದುವಾರಿಕೆಯನ್ನು ಅಭ್ಯರ್ಥಿಯು ಖುದ್ದು ಅಥವಾ ಸೂಚಕರ ಮೂಲಕ ಅಥವಾ ಅಧಿಕೃತವಾಗಿ ನಿಯೋಜಿಸಿದ ಏಜೆಂಟ್ ಮೂಲಕ ಹಿಂತೆಗೆದುಕೊಳ್ಳಲು ಅವಕಾಶವಿದೆ. ಆದರೆ, ಈ ಸಂದರ್ಭದಲ್ಲಿ ಅಭ್ಯರ್ಥಿ ಯಾವುದೇ ಒತ್ತಡ ಇಲ್ಲದೆ ವಾಪಸು ಪಡೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದೂ ಆಯುಕ್ತರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>