ಬೆಂಗಳೂರು: ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು, ಅದನ್ನು ವಾಪಸು ಪಡೆಯತ್ತಿದ್ದರೆ ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದೆ ನ್ಯಾಯಯುತವಾಗಿ ಮತ್ತು ಸ್ವ ಇಚ್ಛೆಯಿಂದ ಹಿಂಪಡೆಯುತ್ತಿದ್ದಾರೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ.