ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಯ್ಯ, ‘ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬಸವ ಅನುಯಾಯಿಗಳಿಗೆ, ಲಿಂಗಾಯತ ಧರ್ಮದವರಿಗೆ ಅರಿವು ಮೂಡಿಸಲು ವಚನ ಸಾಹಿತ್ಯದ ಆಶೋತ್ತರಗಳನ್ನು ಪಾಲಿಸಲು ತಿಳಿಸಿದರು. ಮನೆಗಳಲ್ಲಿ ಗಣಪತಿಯನ್ನು ವಿಘ್ನ ನಿವಾರಕನನ್ನಾಗಿ ಪೂಜಿಸುವುದು, ಪ್ರಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ. ಅದರ ಬದಲು ವಾಸ್ತವಕ್ಕೆ ತಕ್ಕುದಾದ ವಚನಗಳನ್ನು ಪಠಿಸಬೇಕೆಂದು ಕರೆ ನೀಡಿದ್ದರು. ಆದರೆ, ಲಿಂಗಾಯತ ಧರ್ಮದ ಅರಿವಿಲ್ಲದ ಕೆಲವರು ಸ್ವಾಮೀಜಿ ಹೇಳಿಕೆ ತಿರುಚಿ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಸಿ ಸ್ವಾಮೀಜಿ ಘನತೆಗೆ ಧಕ್ಕೆ ತರುತ್ತಿದ್ದಾರೆ’ ಎಂದು ದೂರಿದರು.