<p><strong>ಬೆಂಗಳೂರು:</strong> ಕಾಂಗ್ರೆಸ್ ಪಕ್ಷ ಹೊರಗಿನಿಂದ ಸುಮಾರು ನಾಲ್ಕು ಸಾವಿರ ಜನರನ್ನು ಕರೆದುಕೊಂಡು ಬಂದಿದ್ದು, ಅವರು ಆರ್.ಆರ್.ನಗರದಲ್ಲಿ ಭೀತಿ ಸೃಷ್ಟಿಸುತ್ತಿದ್ದಾರೆ ಎಂದು ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ದೂರಿದ್ದಾರೆ.</p>.<p>ಹೊರಗಿನಿಂದ ಬಂದ ಜನರಿಂದ ಮತದಾರರ ಗುರುತಿನ ಚೀಟಿಯನ್ನು ಸಂಗ್ರಹಿಸುತ್ತಿದ್ದಾರೆ. ಇದರಲ್ಲಿ ಚುನಾವಣಾ ರಾಜಕೀಯಕ್ಕಿಂತ ವೈಯಕ್ತಿಕ ದ್ವೇಷವೇ ಎದ್ದು ಕಾಣಿಸುತ್ತಿದೆ ಎಂದು ಅವರು ಪ್ರಚಾರದ ವೇಳೆ ಆರೋಪಿಸಿದ್ದಾರೆ.</p>.<p>‘ಹಿಂದೆ ಯಾವುದೇ ಚುನಾವಣೆಯಲ್ಲಿ ಇಂತಹ ಸ್ಥಿತಿ ಇರಲಿಲ್ಲ. ಈ ಭಾರಿ ಪರಿಸ್ಥಿತಿಯೇ ಭಿನ್ನವಾಗಿದೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡುತ್ತೇನೆ. ಪರಿಸ್ಥಿತಿ ಹೀಗೆ ಬಿಟ್ಟರೆ ಮುಂದೆ ಸ್ಥಳೀಯರಿಗೆ ಕಷ್ಟವಾಗುತ್ತದೆ. ಚುನಾವಣೆ ಸುಲಲಿತವಾಗಿ ನಡೆಸಲು ಮಿಲಿಟರಿಯೇ ಬೇಕಾಗಬಹುದು’ ಎಂದೂ ಅವರು ಹೇಳಿದರು.</p>.<p>ಸಚಿವರ ಭರಾಟೆಯ ಪ್ರಚಾರ: ಕಂದಾಯ ಸಚಿವ ಆರ್.ಅಶೋಕ, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ ಅವರು ಪ್ರತ್ಯೇಕವಾಗಿ ಬೇರೆ ಬೇರೆ ಪ್ರದೇಶಗಳಲ್ಲಿ ಮುನಿರತ್ನ ಪರವಾಗಿ ಮತಯಾಚಿಸಿದರು. ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಆರಗ ಜ್ಞಾನೇಂದ್ರ ಪ್ರಚಾರ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ ಪಕ್ಷ ಹೊರಗಿನಿಂದ ಸುಮಾರು ನಾಲ್ಕು ಸಾವಿರ ಜನರನ್ನು ಕರೆದುಕೊಂಡು ಬಂದಿದ್ದು, ಅವರು ಆರ್.ಆರ್.ನಗರದಲ್ಲಿ ಭೀತಿ ಸೃಷ್ಟಿಸುತ್ತಿದ್ದಾರೆ ಎಂದು ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ದೂರಿದ್ದಾರೆ.</p>.<p>ಹೊರಗಿನಿಂದ ಬಂದ ಜನರಿಂದ ಮತದಾರರ ಗುರುತಿನ ಚೀಟಿಯನ್ನು ಸಂಗ್ರಹಿಸುತ್ತಿದ್ದಾರೆ. ಇದರಲ್ಲಿ ಚುನಾವಣಾ ರಾಜಕೀಯಕ್ಕಿಂತ ವೈಯಕ್ತಿಕ ದ್ವೇಷವೇ ಎದ್ದು ಕಾಣಿಸುತ್ತಿದೆ ಎಂದು ಅವರು ಪ್ರಚಾರದ ವೇಳೆ ಆರೋಪಿಸಿದ್ದಾರೆ.</p>.<p>‘ಹಿಂದೆ ಯಾವುದೇ ಚುನಾವಣೆಯಲ್ಲಿ ಇಂತಹ ಸ್ಥಿತಿ ಇರಲಿಲ್ಲ. ಈ ಭಾರಿ ಪರಿಸ್ಥಿತಿಯೇ ಭಿನ್ನವಾಗಿದೆ. ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡುತ್ತೇನೆ. ಪರಿಸ್ಥಿತಿ ಹೀಗೆ ಬಿಟ್ಟರೆ ಮುಂದೆ ಸ್ಥಳೀಯರಿಗೆ ಕಷ್ಟವಾಗುತ್ತದೆ. ಚುನಾವಣೆ ಸುಲಲಿತವಾಗಿ ನಡೆಸಲು ಮಿಲಿಟರಿಯೇ ಬೇಕಾಗಬಹುದು’ ಎಂದೂ ಅವರು ಹೇಳಿದರು.</p>.<p>ಸಚಿವರ ಭರಾಟೆಯ ಪ್ರಚಾರ: ಕಂದಾಯ ಸಚಿವ ಆರ್.ಅಶೋಕ, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ ಅವರು ಪ್ರತ್ಯೇಕವಾಗಿ ಬೇರೆ ಬೇರೆ ಪ್ರದೇಶಗಳಲ್ಲಿ ಮುನಿರತ್ನ ಪರವಾಗಿ ಮತಯಾಚಿಸಿದರು. ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಆರಗ ಜ್ಞಾನೇಂದ್ರ ಪ್ರಚಾರ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>