<p><strong>ಬೆಂಗಳೂರು:</strong> ಕೊರೊನಾ ಸಂದರ್ಭದಲ್ಲೂ ಮನೆ ಮನೆಗಳಿಗೆ ದಿನಪತ್ರಿಕೆ ತಲುಪಿಸುತ್ತಿರುವ ಪತ್ರಿಕಾ ವಿತರಕರಿಗೆ ಆರೋಗ್ಯ ವಿಮೆ ಹಾಗೂ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸ್ಥಳೀಯ ಶಾಸಕರು ಹಾಗೂ ಸಚಿವರಿಗೆ ನಗರದ ಪತ್ರಿಕಾ ವಿತರಕರು ಮನವಿ ಸಲ್ಲಿಸಿದರು.</p>.<p>‘ಪತ್ರಕರ್ತರಿಗೆ ಸರ್ಕಾರ ಈಗಾಗಲೇ ವಿಮಾ ಸೌಲಭ್ಯ ಕಲ್ಪಿಸಿದೆ. ಇದೇ ಮಾದರಿಯ ವಿಮಾ ಸೌಲಭ್ಯವನ್ನು ಪತ್ರಿಕಾ ವಿತರಕರು, ಪತ್ರಿಕೆ ಹಂಚುವವರು ಹಾಗೂ ಪತ್ರಿಕೆಗಳ ಮಾರಾಟ ಮಾಡುವವರಿಗೂ ಘೋಷಿಸಬೇಕು’ ಎಂದು ಬೆಂಗಳೂರು ನಗರ ಪತ್ರಿಕಾ ವಿತರಕರ ಬಳಗದ ಅಧ್ಯಕ್ಷ ಎನ್.ದೇವರಾಜ್ ಒತ್ತಾಯಿಸಿದರು.</p>.<p>‘ಕೊರೊನಾ ಸೋಂಕಿನ ನಡುವೆಯೂ ಪತ್ರಿಕಾ ವಿತಕರರು ಎದೆಗುಂದದೆ ಜನರಿಗೆ ಮಾಹಿತಿ ತಲುಪಿಸುವ ಸಲುವಾಗಿ ದಿನಪತ್ರಿಕೆಗಳನ್ನು ಹಂಚುತ್ತಿದ್ದಾರೆ. ನಗರದಲ್ಲಿರುವ 3 ಸಾವಿರಕ್ಕೂ ಹೆಚ್ಚಿನ ಪತ್ರಿಕಾ ವಿತರಕರ ಕೆಳಗೆ 15 ಸಾವಿರಕ್ಕೂ ಹೆಚ್ಚು ಪತ್ರಿಕೆ ಹಂಚುವ ಹುಡುಗರು ಕೆಲಸ ಮಾಡುತ್ತಿದ್ದಾರೆ. ಅಸಂಘಟಿತರಾಗಿರುವ ಇವರಿಗೆ ಬರುವ ಅಲ್ಪ ಸಂಬಳವೇ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ನಗರದಲ್ಲಿ ಪತ್ರಿಕೆಗಳನ್ನು ಮಾರಾಟ ಮಾಡುವ 1,500ಕ್ಕೂ ಹೆಚ್ಚು ಮಳಿಗೆಗಳಿವೆ. ಕೊರೊನಾ ಸೋಂಕಿನಿಂದ ಮಳಿಗೆಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಸರ್ಕಾರವೇ ಇವರ ನೆರವಿಗೆ ಧಾವಿಸಬೇಕಿದೆ’ ಎಂದರು.</p>.<p>‘ಪತ್ರಿಕೆ ವಿತರಿಸುವ ಹುಡುಗರು ಕೊರೊನಾ ಕಾರಣಕ್ಕೆ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪತ್ರಿಕಾ ವಿತರಕರ ಕಷ್ಟ ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ’ ಎಂದು ಯಲಹಂಕ ವಲಯದ ದಿನಪತ್ರಿಕೆ ವಿತರಕರ ಸಂಘದ ಅಧ್ಯಕ್ಷ ಎಂ.ಸತೀಶ್ ಅಳಲು ತೋಡಿಕೊಂಡರು.</p>.<p>‘ಪತ್ರಿಕಾ ವಿತರಕರು ಹಾಗೂ ಕೆಲಸಗಾರರಿಗೆ ಕನಿಷ್ಠ ವೇತನ ಸೌಲಭ್ಯವಿಲ್ಲ. ಒಂದು ವೇಳೆ ಈ ವೃತ್ತಿಯಲ್ಲಿ ತೊಡಗಿರುವವರಿಗೆ ಸೋಂಕು ತಗುಲಿದರೆ, ಅದರ ಚಿಕಿತ್ಸಾ ವೆಚ್ಚ ಭರಿಸಲೂ ಅವರಿಂದ ಸಾಧ್ಯವಿಲ್ಲ. ಇವರನ್ನೇ ಆಶ್ರಯಿಸಿರುವ ಕುಟುಂಬಗಳು ಸಂಕಷ್ಟದಲ್ಲಿವೆ. ಇಂತಹ ಶೋಚನೀಯ ಸ್ಥಿತಿಯಲ್ಲಿ ಪತ್ರಿಕಾ ವಿತರಕರು ಕೆಲಸ ಮಾಡಬೇಕಿದೆ’ ಎಂದು ವಿವರಿಸಿದರು.</p>.<p>‘ವಿಮೆ ಸೌಲಭ್ಯದ ಜೊತೆಗೆ ಕೆಲಸಗಾರರಿಗೆ ಉಚಿತ ಚಿಕಿತ್ಸೆ ಸಿಗುವಂತಾಗಬೇಕು. ಆಟೊ, ಟ್ಯಾಕ್ಸಿ ಚಾಲಕರು ಸೇರಿ ವಿವಿಧ ಶ್ರಮಿಕ ವರ್ಗಗಳಿಗೆ ನೆರವು ಘೋಷಿಸುವಂತೆ ಕೊರೊನಾ ಮುಗಿಯುವವರೆಗೆ ಪತ್ರಿಕಾ ವಿತರಕರಿಗೆ ಸರ್ಕಾರ ನೆರವು ಘೋಷಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸಂದರ್ಭದಲ್ಲೂ ಮನೆ ಮನೆಗಳಿಗೆ ದಿನಪತ್ರಿಕೆ ತಲುಪಿಸುತ್ತಿರುವ ಪತ್ರಿಕಾ ವಿತರಕರಿಗೆ ಆರೋಗ್ಯ ವಿಮೆ ಹಾಗೂ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಸ್ಥಳೀಯ ಶಾಸಕರು ಹಾಗೂ ಸಚಿವರಿಗೆ ನಗರದ ಪತ್ರಿಕಾ ವಿತರಕರು ಮನವಿ ಸಲ್ಲಿಸಿದರು.</p>.<p>‘ಪತ್ರಕರ್ತರಿಗೆ ಸರ್ಕಾರ ಈಗಾಗಲೇ ವಿಮಾ ಸೌಲಭ್ಯ ಕಲ್ಪಿಸಿದೆ. ಇದೇ ಮಾದರಿಯ ವಿಮಾ ಸೌಲಭ್ಯವನ್ನು ಪತ್ರಿಕಾ ವಿತರಕರು, ಪತ್ರಿಕೆ ಹಂಚುವವರು ಹಾಗೂ ಪತ್ರಿಕೆಗಳ ಮಾರಾಟ ಮಾಡುವವರಿಗೂ ಘೋಷಿಸಬೇಕು’ ಎಂದು ಬೆಂಗಳೂರು ನಗರ ಪತ್ರಿಕಾ ವಿತರಕರ ಬಳಗದ ಅಧ್ಯಕ್ಷ ಎನ್.ದೇವರಾಜ್ ಒತ್ತಾಯಿಸಿದರು.</p>.<p>‘ಕೊರೊನಾ ಸೋಂಕಿನ ನಡುವೆಯೂ ಪತ್ರಿಕಾ ವಿತಕರರು ಎದೆಗುಂದದೆ ಜನರಿಗೆ ಮಾಹಿತಿ ತಲುಪಿಸುವ ಸಲುವಾಗಿ ದಿನಪತ್ರಿಕೆಗಳನ್ನು ಹಂಚುತ್ತಿದ್ದಾರೆ. ನಗರದಲ್ಲಿರುವ 3 ಸಾವಿರಕ್ಕೂ ಹೆಚ್ಚಿನ ಪತ್ರಿಕಾ ವಿತರಕರ ಕೆಳಗೆ 15 ಸಾವಿರಕ್ಕೂ ಹೆಚ್ಚು ಪತ್ರಿಕೆ ಹಂಚುವ ಹುಡುಗರು ಕೆಲಸ ಮಾಡುತ್ತಿದ್ದಾರೆ. ಅಸಂಘಟಿತರಾಗಿರುವ ಇವರಿಗೆ ಬರುವ ಅಲ್ಪ ಸಂಬಳವೇ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ನಗರದಲ್ಲಿ ಪತ್ರಿಕೆಗಳನ್ನು ಮಾರಾಟ ಮಾಡುವ 1,500ಕ್ಕೂ ಹೆಚ್ಚು ಮಳಿಗೆಗಳಿವೆ. ಕೊರೊನಾ ಸೋಂಕಿನಿಂದ ಮಳಿಗೆಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಸರ್ಕಾರವೇ ಇವರ ನೆರವಿಗೆ ಧಾವಿಸಬೇಕಿದೆ’ ಎಂದರು.</p>.<p>‘ಪತ್ರಿಕೆ ವಿತರಿಸುವ ಹುಡುಗರು ಕೊರೊನಾ ಕಾರಣಕ್ಕೆ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಪತ್ರಿಕಾ ವಿತರಕರ ಕಷ್ಟ ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ’ ಎಂದು ಯಲಹಂಕ ವಲಯದ ದಿನಪತ್ರಿಕೆ ವಿತರಕರ ಸಂಘದ ಅಧ್ಯಕ್ಷ ಎಂ.ಸತೀಶ್ ಅಳಲು ತೋಡಿಕೊಂಡರು.</p>.<p>‘ಪತ್ರಿಕಾ ವಿತರಕರು ಹಾಗೂ ಕೆಲಸಗಾರರಿಗೆ ಕನಿಷ್ಠ ವೇತನ ಸೌಲಭ್ಯವಿಲ್ಲ. ಒಂದು ವೇಳೆ ಈ ವೃತ್ತಿಯಲ್ಲಿ ತೊಡಗಿರುವವರಿಗೆ ಸೋಂಕು ತಗುಲಿದರೆ, ಅದರ ಚಿಕಿತ್ಸಾ ವೆಚ್ಚ ಭರಿಸಲೂ ಅವರಿಂದ ಸಾಧ್ಯವಿಲ್ಲ. ಇವರನ್ನೇ ಆಶ್ರಯಿಸಿರುವ ಕುಟುಂಬಗಳು ಸಂಕಷ್ಟದಲ್ಲಿವೆ. ಇಂತಹ ಶೋಚನೀಯ ಸ್ಥಿತಿಯಲ್ಲಿ ಪತ್ರಿಕಾ ವಿತರಕರು ಕೆಲಸ ಮಾಡಬೇಕಿದೆ’ ಎಂದು ವಿವರಿಸಿದರು.</p>.<p>‘ವಿಮೆ ಸೌಲಭ್ಯದ ಜೊತೆಗೆ ಕೆಲಸಗಾರರಿಗೆ ಉಚಿತ ಚಿಕಿತ್ಸೆ ಸಿಗುವಂತಾಗಬೇಕು. ಆಟೊ, ಟ್ಯಾಕ್ಸಿ ಚಾಲಕರು ಸೇರಿ ವಿವಿಧ ಶ್ರಮಿಕ ವರ್ಗಗಳಿಗೆ ನೆರವು ಘೋಷಿಸುವಂತೆ ಕೊರೊನಾ ಮುಗಿಯುವವರೆಗೆ ಪತ್ರಿಕಾ ವಿತರಕರಿಗೆ ಸರ್ಕಾರ ನೆರವು ಘೋಷಿಸಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>