<p><strong>ಬೆಂಗಳೂರು:</strong> ಪ್ರಶ್ನೆಪತ್ರಿಕೆ ಸೋರಿಕೆಯಾದ ಕಾರಣ ಅ.12ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಆರನೇ ಸೆಮಿಸ್ಟರ್ನ ‘ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್’ (ಪಿಪಿಎ) ವಿಷಯದ ಪರೀಕ್ಷೆಯನ್ನು ಅ.17ಕ್ಕೆ ಮುಂದೂಡಲಾಗಿದೆ.</p>.<p>ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗದ ಪಿಪಿಎ ವಿಷಯದ ಪರೀಕ್ಷೆಯು ಸೋಮವಾರ ಮಧ್ಯಾಹ್ನ 2 ಗಂಟೆಗೆ ನಡೆಯಬೇಕಿತ್ತು. ಆದರೆ, ಕಿಡಿಗೇಡಿಗಳು ಅಂದು ಬೆಳಿಗ್ಗೆ 11.30ರ ವೇಳೆಗೆ ಪ್ರಶ್ನೆಪತ್ರಿಕೆಯ ಫೋಟೊಗಳನ್ನು ವಾಟ್ಸ್ ಆಪ್ ಮೂಲಕ ಹರಿಬಿಟ್ಟಿದ್ದರು.</p>.<p>ಇದು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೊಬೈಲ್ಗಳಿಗೂ ರವಾನೆಯಾಗಿತ್ತು. ಕೂಡಲೇ ಈ ವಿಷಯವನ್ನು ವಿಶ್ವವಿದ್ಯಾಲಯದ ಗಮನಕ್ಕೆ ತಂದ ಕಾರಣ, ಪರೀಕ್ಷೆ ಸ್ಥಗಿತಗೊಳಿಸಲಾಯಿತು.</p>.<p>‘ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಕುರಿತು ತನಿಖೆ ನಡೆಸುವಂತೆ ಜ್ಞಾನಭಾರತಿ ಠಾಣೆ ಹಾಗೂ ಸಿಸಿಬಿಗೆ ದೂರು ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.</p>.<p>‘ಹೊಸ ಪ್ರಶ್ನೆಪತ್ರಿಕೆಯೊಂದಿಗೆ ಅ.17ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಲಿದೆ’ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಶ್ನೆಪತ್ರಿಕೆ ಸೋರಿಕೆಯಾದ ಕಾರಣ ಅ.12ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಆರನೇ ಸೆಮಿಸ್ಟರ್ನ ‘ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್’ (ಪಿಪಿಎ) ವಿಷಯದ ಪರೀಕ್ಷೆಯನ್ನು ಅ.17ಕ್ಕೆ ಮುಂದೂಡಲಾಗಿದೆ.</p>.<p>ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗದ ಪಿಪಿಎ ವಿಷಯದ ಪರೀಕ್ಷೆಯು ಸೋಮವಾರ ಮಧ್ಯಾಹ್ನ 2 ಗಂಟೆಗೆ ನಡೆಯಬೇಕಿತ್ತು. ಆದರೆ, ಕಿಡಿಗೇಡಿಗಳು ಅಂದು ಬೆಳಿಗ್ಗೆ 11.30ರ ವೇಳೆಗೆ ಪ್ರಶ್ನೆಪತ್ರಿಕೆಯ ಫೋಟೊಗಳನ್ನು ವಾಟ್ಸ್ ಆಪ್ ಮೂಲಕ ಹರಿಬಿಟ್ಟಿದ್ದರು.</p>.<p>ಇದು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಮೊಬೈಲ್ಗಳಿಗೂ ರವಾನೆಯಾಗಿತ್ತು. ಕೂಡಲೇ ಈ ವಿಷಯವನ್ನು ವಿಶ್ವವಿದ್ಯಾಲಯದ ಗಮನಕ್ಕೆ ತಂದ ಕಾರಣ, ಪರೀಕ್ಷೆ ಸ್ಥಗಿತಗೊಳಿಸಲಾಯಿತು.</p>.<p>‘ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಕುರಿತು ತನಿಖೆ ನಡೆಸುವಂತೆ ಜ್ಞಾನಭಾರತಿ ಠಾಣೆ ಹಾಗೂ ಸಿಸಿಬಿಗೆ ದೂರು ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ತಿಳಿಸಿದ್ದಾರೆ.</p>.<p>‘ಹೊಸ ಪ್ರಶ್ನೆಪತ್ರಿಕೆಯೊಂದಿಗೆ ಅ.17ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಲಿದೆ’ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>