ಇದನ್ನು ಗಮನಿಸಿದ ಲಕ್ಷ್ಮೀಕಾಂತ್ ಅವರು, ತಮ್ಮ ಪಿಸ್ತೂಲ್ನಿಂದ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಆದರೆ, ಅದಕ್ಕೆ ಬಗ್ಗದ ಅಮೀರ್, ತನ್ನ ಕೈಯಲ್ಲಿದ್ದ ಆಯುಧವನ್ನು ಬೀಸಿದ್ದ. ಆಗ ತಮ್ಮ ಹಾಗೂ ಸಿಬ್ಬಂದಿಯ ಆತ್ಮರಕ್ಷಣೆಗಾಗಿ ಲಕ್ಷ್ಮೀಕಾಂತ್, ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಾಗುತ್ತಿದ್ದಂತೆ ಸ್ಥಳದಲ್ಲೇ ಕುಸಿದುಬಿದ್ದ ಅಮೀರ್ನನ್ನು ಸಿಸಿಬಿ ಪೊಲೀಸರು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ಉಮೇಶ್ ಚಿಕಿತ್ಸೆ
ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.