ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ಫ್ರಾನ್ಸ್ ದೇಶದಲ್ಲಿನ ಘನ ತ್ಯಾಜ್ಯ ಸಂಸ್ಕರಣಾ ವಿಧಾನದ ಕುರಿತು ಅಧ್ಯಯನ ನಡೆಸಲು ನ.28 ರಿಂದ ಡಿ. 3 ರವರೆಗೆ ಫ್ರಾನ್ಸ್ಗೆ ತೆರಳಿದ್ದಾರೆ.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಅಪರ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್ ಅವರೊಂದಿಗೆ ಈ ಅಧ್ಯಯನ ಪ್ರವಾಸಕ್ಕೆ ತೆರಳಲಿದ್ದಾರೆ.
ಫ್ರಾನ್ಸ್ ದೇಶದ ಮಹಾನಗರಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯಗಳನ್ನು ಸಂಸ್ಕರಣೆ ಮಾಡುವ ವಿಧಾನ ಉತ್ತಮವಾಗಿದ್ದು, ಅವರ ಮಾದರಿಯನ್ನು ಅಧ್ಯಯನ ಮಾಡಲಿದ್ದಾರೆ.