<p><strong>ಬೆಂಗಳೂರು</strong>: ಡಿಜಿಟಲ್ ಪರಿವರ್ತನೆಯ ಮೂಲಕ ಗ್ರಾಮ ಪಂಚಾಯತಿಗಳ ಸಾಮರ್ಥ್ಯ ವೃದ್ಧಿಗಾಗಿ ದಿಕ್ಸೂಚಿ ಕಲಿಕಾ ತಂತ್ರಜ್ಞಾನ (ಎನ್ಎಲ್ಟಿ- ನ್ಯಾವಿಗೇಟೆಡ್ ಲರ್ನಿಂಗ್ ಟೆಕ್ನಾಲಜಿ) ಮತ್ತು ಇತರ ಸೀಮಾತೀತ ತಂತ್ರಜ್ಞಾನಗಳನ್ನು ಬಳಸುವ ಯೋಜನೆಯನ್ನು ರಾಜ್ಯದ ಮುಂದಿನ ಬಜೆಟ್ನಲ್ಲಿ ಅಳವಡಿಸಲು ಪ್ರಯತ್ನಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಭರವಸೆ ನೀಡಿದರು.</p>.<p>ನಗರದ ಅರಮನೆ ಮೈದಾನದ ಕೆ.ಸಿ. ಕ್ಲಬ್ ಆವರಣದಲ್ಲಿ ಕೃಷಿ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ ‘ಅಗ್ರಿ ಬೆಸ್ಟ್ ಕ್ಲಬ್-75ʼರಲ್ಲಿ ಮಾತನಾಡಿದ ಅವರು, ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಸಚಿವರ ಜೊತೆಗೂ ಚರ್ಚಿಸುವುದಾಗಿ ತಿಳಿಸಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘವು ಇಂಥ ವಿಚಾರಗಳನ್ನು ತನ್ನ ಕಾರ್ಯಕ್ಷೇತ್ರದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.</p>.<p>ಸಂಪೂರ್ಣ ಸ್ವರಾಜ್ ಫೌಂಡೇಶನ್ ಸಂಸ್ಥಾಪಕ ಹಾಗೂ ನಿರ್ವಾಹಕ ಟ್ರಸ್ಟಿ ಶಂಕರ ಕೆ. ಪ್ರಸಾದ್ ಮಾತನಾಡಿ, ‘ಎನ್ಎಲ್ಟಿ ಯಂತಹ ಉಪಕ್ರಮಗಳು ಗ್ರಾಮೀಣ ಸಮುದಾಯಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರುತ್ತವೆ’ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಎನ್.ಗೋಪಾಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡಿಜಿಟಲ್ ಪರಿವರ್ತನೆಯ ಮೂಲಕ ಗ್ರಾಮ ಪಂಚಾಯತಿಗಳ ಸಾಮರ್ಥ್ಯ ವೃದ್ಧಿಗಾಗಿ ದಿಕ್ಸೂಚಿ ಕಲಿಕಾ ತಂತ್ರಜ್ಞಾನ (ಎನ್ಎಲ್ಟಿ- ನ್ಯಾವಿಗೇಟೆಡ್ ಲರ್ನಿಂಗ್ ಟೆಕ್ನಾಲಜಿ) ಮತ್ತು ಇತರ ಸೀಮಾತೀತ ತಂತ್ರಜ್ಞಾನಗಳನ್ನು ಬಳಸುವ ಯೋಜನೆಯನ್ನು ರಾಜ್ಯದ ಮುಂದಿನ ಬಜೆಟ್ನಲ್ಲಿ ಅಳವಡಿಸಲು ಪ್ರಯತ್ನಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಭರವಸೆ ನೀಡಿದರು.</p>.<p>ನಗರದ ಅರಮನೆ ಮೈದಾನದ ಕೆ.ಸಿ. ಕ್ಲಬ್ ಆವರಣದಲ್ಲಿ ಕೃಷಿ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ ‘ಅಗ್ರಿ ಬೆಸ್ಟ್ ಕ್ಲಬ್-75ʼರಲ್ಲಿ ಮಾತನಾಡಿದ ಅವರು, ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಸಚಿವರ ಜೊತೆಗೂ ಚರ್ಚಿಸುವುದಾಗಿ ತಿಳಿಸಿದರು.</p>.<p>ಕೃಷಿ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘವು ಇಂಥ ವಿಚಾರಗಳನ್ನು ತನ್ನ ಕಾರ್ಯಕ್ಷೇತ್ರದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.</p>.<p>ಸಂಪೂರ್ಣ ಸ್ವರಾಜ್ ಫೌಂಡೇಶನ್ ಸಂಸ್ಥಾಪಕ ಹಾಗೂ ನಿರ್ವಾಹಕ ಟ್ರಸ್ಟಿ ಶಂಕರ ಕೆ. ಪ್ರಸಾದ್ ಮಾತನಾಡಿ, ‘ಎನ್ಎಲ್ಟಿ ಯಂತಹ ಉಪಕ್ರಮಗಳು ಗ್ರಾಮೀಣ ಸಮುದಾಯಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರುತ್ತವೆ’ ಎಂದು ಹೇಳಿದರು.</p>.<p>ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಎನ್.ಗೋಪಾಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>