ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಭೇಟಿ ಮಾಡಿದ ಸಿದ್ದರಾಮಯ್ಯ, ಪರಮೇಶ್ವರ

Last Updated 27 ಅಕ್ಟೋಬರ್ 2019, 4:56 IST
ಅಕ್ಷರ ಗಾತ್ರ

ಬೆಂಗಳೂರು: ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಭಾನುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಈಚೆಗಷ್ಟೇ ಐಟಿ ದಾಳಿಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ ಭೇಟಿ ಮಾಡಿ, ಕುಶಲ ವಿಚಾರಿಸಿದರು.

ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಶನಿವಾರವಷ್ಟೇ ಬೆಂಗಳೂರಿಗೆ ಬಂದಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದ್ದರು.

ಈ ಸಂದರ್ಭಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದ ಡಿ.ಕೆ.ಶಿವಕುಮಾರ್, ‘ನನ್ನ ಜತೆ ಇದ್ದವರನ್ನೆಲ್ಲ ಕರೆದು ವಿಚಾರಣೆ ನಡೆಸಿದ್ದಾರೆ. ನನ್ನಿಂದ ದುಬಾರಿ ಮೊತ್ತದ ಮೊಬೈಲ್ ಉಡುಗೊರೆ ಪಡೆದ ಬಿಜೆಪಿ ನಾಯಕರಿಗೆ ಈವರೆಗೂ ಆದಾಯ ತೆರಿಗೆ ಇಲಾಖೆ ಏಕೆ ನೋಟಿಸ್ ನೀಡಿಲ್ಲ’ ಎಂದು ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT