<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ಬ್ಯಾರಕ್ಗಳಲ್ಲಿ ಮಂಗಳವಾರ ನಡೆದ ತಪಾಸಣೆ ವೇಳೆ ನಾಲ್ಕು ಮೊಬೈಲ್ ಫೋನ್ಗಳು, ಸಿಮ್ ಕಾರ್ಡ್, ಚಾರ್ಜರ್, ಇಯರ್ ಬಡ್ಸ್ ಮತ್ತು ಇಯರ್ ಫೋನ್ ಪತ್ತೆಯಾಗಿವೆ ಎಂದು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ತಿಳಿಸಿದ್ದಾರೆ.</p>.<p>‘ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನ’ ಅಡಿ ಸಹಾಯಕ ಜೈಲರ್ ಎಸ್.ಜೆ.ಜಕಾತಿ, ಅಧೀಕ್ಷಕ ಎಚ್.ಎ.ಪರಮೇಶ್ ಹಾಗೂ ಸಹಾಯಕ ಅಧೀಕ್ಷಕ ಕರ್ಣ ಬಿ. ಕ್ಷತ್ರಿ ನೇತೃತ್ವದ ತಂಡಗಳು ತಪಾಸಣೆ ಕೈಗೊಂಡಾಗ ಕೀ ಪ್ಯಾಡ್ ಮೊಬೈಲ್, ಆ್ಯಂಡ್ರಾಯ್ಡ್ ಮೊಬೈಲ್ ಸೇರಿ ಕೆಲ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.</p>.<p>ನಿಷೇಧಿತ ವಸ್ತುಗಳನ್ನು ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಮತ್ತು ವಸ್ತುಗಳನ್ನು ಬಳಕೆ ಮಾಡಿದವರ ವಿರುದ್ಧ ಕಾರಾಗೃಹ (ತಿದ್ದುಪಡಿ) ಕಾಯ್ದೆ 2022ರ ಕಲಂ 42ರ ಅನ್ವಯ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಉತ್ತಮ ತಪಾಸಣೆ ಕೈಗೊಂಡ ಸಿಬ್ಬಂದಿಗೆ ₹ 5 ಸಾವಿರ ನಗದು ಬಹುಮಾನ ಹಾಗೂ ಎಚ್.ಎ.ಪರಮೇಶ್ ಮತ್ತು ಕರ್ಣ ಬಿ. ಕ್ಷತ್ರಿ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.</p>.<p>ನವೆಂಬರ್ 11ರಿಂದ ಈವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ನವೆಂಬರ್ 11ರಿಂದ ಡಿಸೆಂಬರ್ 23ರ ಅವಧಿಯಲ್ಲಿ ಒಟ್ಟು 109 ಮೊಬೈಲ್, 24 ಚಾರ್ಜರ್, 88 ಸಿಮ್, 18 ಇಯರ್ ಫೋನ್, ₹64,880 ನಗದು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ಬ್ಯಾರಕ್ಗಳಲ್ಲಿ ಮಂಗಳವಾರ ನಡೆದ ತಪಾಸಣೆ ವೇಳೆ ನಾಲ್ಕು ಮೊಬೈಲ್ ಫೋನ್ಗಳು, ಸಿಮ್ ಕಾರ್ಡ್, ಚಾರ್ಜರ್, ಇಯರ್ ಬಡ್ಸ್ ಮತ್ತು ಇಯರ್ ಫೋನ್ ಪತ್ತೆಯಾಗಿವೆ ಎಂದು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ತಿಳಿಸಿದ್ದಾರೆ.</p>.<p>‘ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನ’ ಅಡಿ ಸಹಾಯಕ ಜೈಲರ್ ಎಸ್.ಜೆ.ಜಕಾತಿ, ಅಧೀಕ್ಷಕ ಎಚ್.ಎ.ಪರಮೇಶ್ ಹಾಗೂ ಸಹಾಯಕ ಅಧೀಕ್ಷಕ ಕರ್ಣ ಬಿ. ಕ್ಷತ್ರಿ ನೇತೃತ್ವದ ತಂಡಗಳು ತಪಾಸಣೆ ಕೈಗೊಂಡಾಗ ಕೀ ಪ್ಯಾಡ್ ಮೊಬೈಲ್, ಆ್ಯಂಡ್ರಾಯ್ಡ್ ಮೊಬೈಲ್ ಸೇರಿ ಕೆಲ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.</p>.<p>ನಿಷೇಧಿತ ವಸ್ತುಗಳನ್ನು ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಮತ್ತು ವಸ್ತುಗಳನ್ನು ಬಳಕೆ ಮಾಡಿದವರ ವಿರುದ್ಧ ಕಾರಾಗೃಹ (ತಿದ್ದುಪಡಿ) ಕಾಯ್ದೆ 2022ರ ಕಲಂ 42ರ ಅನ್ವಯ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಉತ್ತಮ ತಪಾಸಣೆ ಕೈಗೊಂಡ ಸಿಬ್ಬಂದಿಗೆ ₹ 5 ಸಾವಿರ ನಗದು ಬಹುಮಾನ ಹಾಗೂ ಎಚ್.ಎ.ಪರಮೇಶ್ ಮತ್ತು ಕರ್ಣ ಬಿ. ಕ್ಷತ್ರಿ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.</p>.<p>ನವೆಂಬರ್ 11ರಿಂದ ಈವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ನವೆಂಬರ್ 11ರಿಂದ ಡಿಸೆಂಬರ್ 23ರ ಅವಧಿಯಲ್ಲಿ ಒಟ್ಟು 109 ಮೊಬೈಲ್, 24 ಚಾರ್ಜರ್, 88 ಸಿಮ್, 18 ಇಯರ್ ಫೋನ್, ₹64,880 ನಗದು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>