<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾಬಂದಿ ಹಾಗೂ ವಿಚಾರಣಾಧೀನ ಕೈದಿಗಳಿಗೆ ನೀಡಲಾಗಿದ್ದ ವಿಶೇಷ ಆತಿಥ್ಯಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪ್ರಕರಣದಲ್ಲಿ ಕೊಲೆ ಆರೋಪಿ ದರ್ಶನ್ ಅವರ ಆಪ್ತ ಧನ್ವೀರ್ ಅವರು ಸಾಕ್ಷ್ಯ ನಾಶಪಡಿಸಿರುವ ಅನುಮಾನ ವ್ಯಕ್ತವಾಗಿದೆ.</p>.<p>ಪ್ರಕರಣದ ತನಿಖೆಗಾಗಿ ಪೊಲೀಸರು ವಶಪಡಿಸಿಕೊಂಡಿದ್ದ ಧನ್ವೀರ್ ಅವರ ಮೊಬೈಲ್ನಲ್ಲಿ ಯಾವುದೇ ದತ್ತಾಂಶ ಸಿಕ್ಕಿಲ್ಲ. ದತ್ತಾಂಶವೇ ಇಲ್ಲದ ಹೊಸ ಮೊಬೈಲ್ ಕೊಟ್ಟು ತನಿಖೆಯ ದಿಕ್ಕು ತಪ್ಪಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮಾಂಸ, ಮದ್ಯ ಸೇವಿಸಿ ನೃತ್ಯ ಮಾಡಿದ್ದ ವಿಡಿಯೊ ಕಳೆದ ತಿಂಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪ ಧನ್ವೀರ್ ಮೇಲಿತ್ತು. ಧನ್ವೀರ್ ಎರಡು ಬಾರಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.</p>.<p>ಜಪ್ತಿ ಮಾಡಿದ್ದ ಮೊಬೈಲ್ ಅನ್ನು ದತ್ತಾಂಶ ಸಂಗ್ರಹಣೆಗಾಗಿ ಸೈಬರ್ ಸೆಲ್ನ ಲ್ಯಾಬ್ಗೆ ಕಳುಹಿಸಿದ್ದರು. ಅದರಲ್ಲಿ ಯಾವುದೇ ದತ್ತಾಂಶ ಇಲ್ಲ ಎಂದು ವರದಿ ನೀಡಲಾಗಿದೆ. </p>.<p>‘ಧನ್ವೀರ್ ಅವರು ಮೊಬೈಲ್ನಲ್ಲಿ ದತ್ತಾಂಶವನ್ನು ಸಂಪೂರ್ಣವಾಗಿ ನಾಶಪಡಿಸಿದ್ದರೇ ಅಥವಾ ಬೇರೊಂದು ಮೊಬೈಲ್ ಕೊಟ್ಟು ತನಿಖೆಯ ದಿಕ್ಕು ತಪ್ಪಿಸಿದ್ದಾರೆಯೇ ಎಂಬ ಅನುಮಾನವಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು. </p><p><strong>ದರ್ಶನ್ಗೆ ಟಿ.ವಿ ಭಾಗ್ಯ</strong></p><p>ಕೊಲೆ ಆರೋಪಿ, ನಟ ದರ್ಶನ್ ಅವರಿಗೆ ಟಿ.ವಿ ಸೌಲಭ್ಯ ಕಲ್ಪಿಸಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಅವರಿರುವ ಬ್ಯಾರಕ್ನಲ್ಲಿ ಟಿ.ವಿ ಅಳವಡಿಸಲಾಗಿದೆ ಜತೆಗೆ, ಅದೇ ಬ್ಯಾರಕ್ ಎದುರು ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮೂಲಗಳು ಹೇಳಿವೆ.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾಬಂದಿ ಹಾಗೂ ವಿಚಾರಣಾಧೀನ ಕೈದಿಗಳಿಗೆ ನೀಡಲಾಗಿದ್ದ ವಿಶೇಷ ಆತಿಥ್ಯಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪ್ರಕರಣದಲ್ಲಿ ಕೊಲೆ ಆರೋಪಿ ದರ್ಶನ್ ಅವರ ಆಪ್ತ ಧನ್ವೀರ್ ಅವರು ಸಾಕ್ಷ್ಯ ನಾಶಪಡಿಸಿರುವ ಅನುಮಾನ ವ್ಯಕ್ತವಾಗಿದೆ.</p>.<p>ಪ್ರಕರಣದ ತನಿಖೆಗಾಗಿ ಪೊಲೀಸರು ವಶಪಡಿಸಿಕೊಂಡಿದ್ದ ಧನ್ವೀರ್ ಅವರ ಮೊಬೈಲ್ನಲ್ಲಿ ಯಾವುದೇ ದತ್ತಾಂಶ ಸಿಕ್ಕಿಲ್ಲ. ದತ್ತಾಂಶವೇ ಇಲ್ಲದ ಹೊಸ ಮೊಬೈಲ್ ಕೊಟ್ಟು ತನಿಖೆಯ ದಿಕ್ಕು ತಪ್ಪಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮಾಂಸ, ಮದ್ಯ ಸೇವಿಸಿ ನೃತ್ಯ ಮಾಡಿದ್ದ ವಿಡಿಯೊ ಕಳೆದ ತಿಂಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪ ಧನ್ವೀರ್ ಮೇಲಿತ್ತು. ಧನ್ವೀರ್ ಎರಡು ಬಾರಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.</p>.<p>ಜಪ್ತಿ ಮಾಡಿದ್ದ ಮೊಬೈಲ್ ಅನ್ನು ದತ್ತಾಂಶ ಸಂಗ್ರಹಣೆಗಾಗಿ ಸೈಬರ್ ಸೆಲ್ನ ಲ್ಯಾಬ್ಗೆ ಕಳುಹಿಸಿದ್ದರು. ಅದರಲ್ಲಿ ಯಾವುದೇ ದತ್ತಾಂಶ ಇಲ್ಲ ಎಂದು ವರದಿ ನೀಡಲಾಗಿದೆ. </p>.<p>‘ಧನ್ವೀರ್ ಅವರು ಮೊಬೈಲ್ನಲ್ಲಿ ದತ್ತಾಂಶವನ್ನು ಸಂಪೂರ್ಣವಾಗಿ ನಾಶಪಡಿಸಿದ್ದರೇ ಅಥವಾ ಬೇರೊಂದು ಮೊಬೈಲ್ ಕೊಟ್ಟು ತನಿಖೆಯ ದಿಕ್ಕು ತಪ್ಪಿಸಿದ್ದಾರೆಯೇ ಎಂಬ ಅನುಮಾನವಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು. </p><p><strong>ದರ್ಶನ್ಗೆ ಟಿ.ವಿ ಭಾಗ್ಯ</strong></p><p>ಕೊಲೆ ಆರೋಪಿ, ನಟ ದರ್ಶನ್ ಅವರಿಗೆ ಟಿ.ವಿ ಸೌಲಭ್ಯ ಕಲ್ಪಿಸಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಅವರಿರುವ ಬ್ಯಾರಕ್ನಲ್ಲಿ ಟಿ.ವಿ ಅಳವಡಿಸಲಾಗಿದೆ ಜತೆಗೆ, ಅದೇ ಬ್ಯಾರಕ್ ಎದುರು ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮೂಲಗಳು ಹೇಳಿವೆ.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>