‘ಡಿಜಿಟಲ್ ಯುಗದಲ್ಲಿ ಬಹುತೇಕ ವ್ಯಾಪಾರ–ವಹಿವಾಟು ಆನ್ಲೈನ್ ಮೂಲಕವೇ ನಡೆಯುತ್ತಿದೆ, ನಗದು ವ್ಯವಹಾರ ಕಡಿಮೆ ಆಗಿದೆ. ಜಾಮರ್ ಅಳವಡಿಕೆಯಿಂದ ಎರಡು ತಿಂಗಳಿನಿಂದ ನೆಟ್ವರ್ಕ್ ಸಮಸ್ಯೆಯಾಗಿದ್ದು, ನಿತ್ಯದ ಕೆಲಸಗಳಿಗೆ ತೊಂದರೆಯಾಗಿದೆ. ಈ ಬಗ್ಗೆ ಜೈಲಿನ ಅಧಿಕಾರಿಗಳಿಗೆ, ಎಡಿಜಿಪಿ ಮತ್ತು ಡಿಐಜಿ ಅವರಿಗೆ ಪತ್ರ ಮುಖೇನ ಮನವಿ ಮಾಡಲಾಗಿದ್ದರೂ ಈವರೆಗೂ ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಲಕ್ಷ್ಮಣ್ ದೂರಿದರು.