<p><strong>ನೆಲಮಂಗಲ:</strong> ‘ಪೋಷಕರು ಮಕ್ಕಳ ಚಲನಚಲನಗಳ ಬಗ್ಗೆ ನಿಗಾ ವಹಿಸಬೇಕು. ಯಾವ ರೀತಿಯ ಸ್ನೇಹಿತರಿದ್ದಾರೆ, ಮಾದಕವಸ್ತುಗಳ ವ್ಯಸನಕ್ಕೊಳಗಾಗಿದ್ದಾರೆಯೇ, ಅಕ್ರಮ ಚಟುವಟಿಕೆಗಳ ಕಡೆ ಆಸಕ್ತಿ ವಹಿಸುತ್ತಿದ್ದಾರೆಯೆ ಎಂದು ಗಮನಹರಿಸಿ ಸಣ್ಣ ವಯಸ್ಸಿನಲ್ಲೇ ತಿದ್ದಬೇಕು’ ಎಂದು ಡಿಐಜಿ ಎಂ.ಎನ್.ಅನುಚೇತ್ ಹೇಳಿದರು.</p>.<p>ಹರ್ಷ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಪ್ರತಿಭಾನ್ವಿತರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಅಗತ್ಯವಿರುವಷ್ಟು ಮಾತ್ರ ಸಾಮಾಜಿಕ ಜಾಲತಾಣವನ್ನು ಬಳಸಬೇಕು. ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳಿಗೆ ಒಳಗಾಗುವ ಮೊದಲು ತಡೆಯಬೇಕು’ ಎಂದರು.</p>.<p>ಹರ್ಷ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್.ಶಿವಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳ ಆಸಕ್ತಿಗಳಿಗನುಗುಣವಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.</p>.<p>ನಿರ್ದೇಶಕ ಯಶಸ್ ವಾರ್ಷಿಕ ವರದಿ ವಾಚಿಸಿದರು. ಉಪಾಧ್ಯಕ್ಷೆ ಗಿರಿಜಾ, ನಿರ್ದೇಶಕ ಹರ್ಷ, ಪಿಯು ಪ್ರಾಂಶುಪಾಲೆ ಜ್ಯೋತಿ ಕಾಮತ್, ಮುಖ್ಯ ಶಿಕ್ಷಕರಾದ ಬಿಂದು ಶರ್ಮ, ಪ್ರೀತಿ.ಕೆ.ಚೌಧರಿ, ಪೂರ್ಣಿಮಾ ಉಪಸ್ಥಿತರಿದ್ದರು. ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಜಾನಪದ ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ‘ಪೋಷಕರು ಮಕ್ಕಳ ಚಲನಚಲನಗಳ ಬಗ್ಗೆ ನಿಗಾ ವಹಿಸಬೇಕು. ಯಾವ ರೀತಿಯ ಸ್ನೇಹಿತರಿದ್ದಾರೆ, ಮಾದಕವಸ್ತುಗಳ ವ್ಯಸನಕ್ಕೊಳಗಾಗಿದ್ದಾರೆಯೇ, ಅಕ್ರಮ ಚಟುವಟಿಕೆಗಳ ಕಡೆ ಆಸಕ್ತಿ ವಹಿಸುತ್ತಿದ್ದಾರೆಯೆ ಎಂದು ಗಮನಹರಿಸಿ ಸಣ್ಣ ವಯಸ್ಸಿನಲ್ಲೇ ತಿದ್ದಬೇಕು’ ಎಂದು ಡಿಐಜಿ ಎಂ.ಎನ್.ಅನುಚೇತ್ ಹೇಳಿದರು.</p>.<p>ಹರ್ಷ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಪ್ರತಿಭಾನ್ವಿತರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಅಗತ್ಯವಿರುವಷ್ಟು ಮಾತ್ರ ಸಾಮಾಜಿಕ ಜಾಲತಾಣವನ್ನು ಬಳಸಬೇಕು. ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳಿಗೆ ಒಳಗಾಗುವ ಮೊದಲು ತಡೆಯಬೇಕು’ ಎಂದರು.</p>.<p>ಹರ್ಷ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್.ಶಿವಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳ ಆಸಕ್ತಿಗಳಿಗನುಗುಣವಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.</p>.<p>ನಿರ್ದೇಶಕ ಯಶಸ್ ವಾರ್ಷಿಕ ವರದಿ ವಾಚಿಸಿದರು. ಉಪಾಧ್ಯಕ್ಷೆ ಗಿರಿಜಾ, ನಿರ್ದೇಶಕ ಹರ್ಷ, ಪಿಯು ಪ್ರಾಂಶುಪಾಲೆ ಜ್ಯೋತಿ ಕಾಮತ್, ಮುಖ್ಯ ಶಿಕ್ಷಕರಾದ ಬಿಂದು ಶರ್ಮ, ಪ್ರೀತಿ.ಕೆ.ಚೌಧರಿ, ಪೂರ್ಣಿಮಾ ಉಪಸ್ಥಿತರಿದ್ದರು. ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಜಾನಪದ ಮತ್ತು ಮನರಂಜನಾ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>