<p>ಬೆಂಗಳೂರು: ಕೇಂದ್ರ ಕೌಶಲ ಅಭಿವೃದ್ಧಿ ಮತ್ತು ಐಟಿ ಇಲಾಖೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಉತ್ತರಹಳ್ಳಿಯಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಶುಕ್ರವಾರ ಸಂವಾದ ನಡೆಸಿದರು.</p>.<p>‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ಯುವಕರು ನಮ್ಮ ಪ್ರಗತಿಯ ನೇತಾರರು. ನವ ಭಾರತ ನಿರ್ಮಾಣದಲ್ಲಿ ಇವರ ಪಾತ್ರ ಅತ್ಯಂತ ಪ್ರಮುಖ’ ಎಂದು ಹೇಳಿದರು.</p>.<p>‘ಪರೀಕ್ಷಾ ಪೆ ಚರ್ಚಾ’ ಪ್ರಧಾನ ಮಂತ್ರಿಯವರ ದೂರದೃಷ್ಟಿ ಕಾರ್ಯಕ್ರಮವಾಗಿದ್ದು, ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಬಳಿ ತೆರಳಿ, ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶ ಇದು ಎಂದರು.</p>.<p>‘ಪರೀಕ್ಷಾ ಯೋಧರು’ ಘೋಷವಾಕ್ಯದಡಿ ಮಕ್ಕಳ ರಚನೆಯ ಚಿತ್ರಪ್ರದರ್ಶನವನ್ನು ಸಚಿವರು ವೀಕ್ಷಿಸಿದರು. ಚಿತ್ರಕಲಾ ಪರಿಷತ್ನ ತಜ್ಞರು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. </p>.<p>ಎಎಂಡಿ ಇಂಡಿಯಾ ಮುಖ್ಯಸ್ಥರಾದ ಜಯಾ ಜಗದೀಶ್, ಇಂಟೆಲ್ ಇಂಡಿಯಾದ ಮುಖ್ಯಸ್ಥರಾದ ನಿವೃತಿ ರಾಯ್, ಕೂ ಇಂಡಿಯಾದ ಸಿಇಒ ಅಪ್ರಮೇಯ, ಶಾಸಕ ಎಂ. ಕೃಷ್ಣಪ್ಪ ಇದ್ದರು.</p>.<p>ಎನ್ಎಸಿಐಎನ್ ಕಾಂಪ್ಲೆಕ್ಸ್ನಲ್ಲಿ ನಡೆದ ರೋಜ್ಗಾರ್ ಮೇಳದಲ್ಲಿ ಭಾಗವಹಿಸಿದ್ದ ಸಚಿವ ರಾಜೀವ್ ಚಂದ್ರಶೇಖರ್, ‘ಕೆಲಸ ಎಂದರೆ ಜನಸೇವೆ ಹಾಗೂ ದೇಶ ಸೇವೆ’ ಎಂದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕ ಪತ್ರ ನೀಡಲಾಯಿತು. ಸಂಸದ ಸದಾನಂದ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೇಂದ್ರ ಕೌಶಲ ಅಭಿವೃದ್ಧಿ ಮತ್ತು ಐಟಿ ಇಲಾಖೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಉತ್ತರಹಳ್ಳಿಯಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಶುಕ್ರವಾರ ಸಂವಾದ ನಡೆಸಿದರು.</p>.<p>‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ‘ಯುವಕರು ನಮ್ಮ ಪ್ರಗತಿಯ ನೇತಾರರು. ನವ ಭಾರತ ನಿರ್ಮಾಣದಲ್ಲಿ ಇವರ ಪಾತ್ರ ಅತ್ಯಂತ ಪ್ರಮುಖ’ ಎಂದು ಹೇಳಿದರು.</p>.<p>‘ಪರೀಕ್ಷಾ ಪೆ ಚರ್ಚಾ’ ಪ್ರಧಾನ ಮಂತ್ರಿಯವರ ದೂರದೃಷ್ಟಿ ಕಾರ್ಯಕ್ರಮವಾಗಿದ್ದು, ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಬಳಿ ತೆರಳಿ, ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶ ಇದು ಎಂದರು.</p>.<p>‘ಪರೀಕ್ಷಾ ಯೋಧರು’ ಘೋಷವಾಕ್ಯದಡಿ ಮಕ್ಕಳ ರಚನೆಯ ಚಿತ್ರಪ್ರದರ್ಶನವನ್ನು ಸಚಿವರು ವೀಕ್ಷಿಸಿದರು. ಚಿತ್ರಕಲಾ ಪರಿಷತ್ನ ತಜ್ಞರು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. </p>.<p>ಎಎಂಡಿ ಇಂಡಿಯಾ ಮುಖ್ಯಸ್ಥರಾದ ಜಯಾ ಜಗದೀಶ್, ಇಂಟೆಲ್ ಇಂಡಿಯಾದ ಮುಖ್ಯಸ್ಥರಾದ ನಿವೃತಿ ರಾಯ್, ಕೂ ಇಂಡಿಯಾದ ಸಿಇಒ ಅಪ್ರಮೇಯ, ಶಾಸಕ ಎಂ. ಕೃಷ್ಣಪ್ಪ ಇದ್ದರು.</p>.<p>ಎನ್ಎಸಿಐಎನ್ ಕಾಂಪ್ಲೆಕ್ಸ್ನಲ್ಲಿ ನಡೆದ ರೋಜ್ಗಾರ್ ಮೇಳದಲ್ಲಿ ಭಾಗವಹಿಸಿದ್ದ ಸಚಿವ ರಾಜೀವ್ ಚಂದ್ರಶೇಖರ್, ‘ಕೆಲಸ ಎಂದರೆ ಜನಸೇವೆ ಹಾಗೂ ದೇಶ ಸೇವೆ’ ಎಂದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕ ಪತ್ರ ನೀಡಲಾಯಿತು. ಸಂಸದ ಸದಾನಂದ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>