ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಟಿ: ಸ್ನೇಹಿತೆಯರ ಮೇಲೆ ಅತ್ಯಾಚಾರ

Last Updated 8 ಫೆಬ್ರುವರಿ 2023, 4:46 IST
ಅಕ್ಷರ ಗಾತ್ರ

ಬೆಂಗಳೂರು: ಸ್ನೇಹಿತೆಯರಿಬ್ಬರನ್ನು ಮನೆಗೆ ಕರೆದು ಮದ್ಯದ ಪಾರ್ಟಿ ಮಾಡಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಗರಕಿಪತಿ ಅಜಯ್ ವೆಂಕಟ್ ಸಾಯಿ ಅಲಿಯಾಸ್ ಅಜಯ್ (23) ಹಾಗೂ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಆದಿತ್ಯ ಅಭಿರಾಜ್ (26) ಬಂಧಿತರು. ಸಂತ್ರಸ್ತ ಯುವತಿಯರು ನೀಡಿರುವ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದರು.

‘ಆರೋಪಿ ಅಜಯ್, ಪಂಜಾಬ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ. ಇನ್ನೊಬ್ಬ ಆರೋಪಿ ಆದಿತ್ಯ, ನಗರದ ಕಾಲೇಜೊಂದರ ಸ್ನಾತಕೋತ್ತರ ಪದವಿ ವಿದ್ಯಾರ್ಥಿ. ಪಂಜಾಬ್‌ನಲ್ಲಿದ್ದ ಅಜಯ್, ಆಗಾಗ ಬೆಂಗಳೂರಿಗೆ ಬರುತ್ತಿದ್ದ. ಕೋರಮಂಗಲದ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ಪ್ಲ್ಯಾಟ್‌ನಲ್ಲಿದ್ದ ಸ್ನೇಹಿತ ಆದಿತ್ಯ ಜೊತೆ ಸೇರಿ ಪಾರ್ಟಿ ಮಾಡುತ್ತಿದ್ದ’ ಎಂದು ಹೇಳಿದರು.

‘ಸಂತ್ರಸ್ತ ಯುವತಿಯರಿಬ್ಬರ ಪೈಕಿ ಒಬ್ಬರು, ಆರೋಪಿ ಅಜಯ್‌ ಜೊತೆ ಪಂಜಾಬ್‌ನ ಒಂದೇ ಕಾಲೇಜಿನಲ್ಲಿ ಮೂರು ವರ್ಷ ಓದಿದ್ದರು. ಬಳಿಕ ಬೆಂಗಳೂರಿಗೆ ಬಂದಿದ್ದ ಯುವತಿ, ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗಾಗ ಅಜಯ್‌ ಜೊತೆ ಮಾತನಾಡುತ್ತಿದ್ದರು’ ಎಂದು ತಿಳಿಸಿದರು.

ಕರೆ ಮಾಡಿ ಪಾರ್ಟಿಗೆ ಕರೆದಿದ್ದ: ‘ಆರೋಪಿ ಅಜಯ್, ಪಂಜಾಬ್‌ನಿಂದ ಫೆ. 4ರಂದು ಬೆಂಗಳೂರಿಗೆ ಬಂದಿದ್ದ. ಆದಿತ್ಯ ಮನೆಯಲ್ಲಿ ಉಳಿದುಕೊಂಡಿದ್ದ. ಫೆ. 5ರಂದು ಸಂಜೆ ಸ್ನೇಹಿತೆಗೆ ಕರೆ ಮಾಡಿದ್ದ ಅಜಯ್, ಮದ್ಯದ ಪಾರ್ಟಿ ಮಾಡೋಣವೆಂದು ಮನೆಗೆ ಕರೆದಿದ್ದ’ ಎಂದು ಪೊಲೀಸರು ಹೇಳಿದರು.

‘ಅಜಯ್‌ ಮಾತಿಗೆ ಒಪ್ಪಿದ ಯುವತಿ, ತನ್ನ ಸ್ನೇಹಿತೆಯನ್ನು ಜೊತೆಯಲ್ಲಿ ಕರೆದುಕೊಂಡು ಆದಿತ್ಯ ಮನೆಗೆ ರಾತ್ರಿ ಹೋಗಿದ್ದರು. ನಾಲ್ವರೂ ಮದ್ಯ ಕುಡಿದಿದ್ದರು. ತಡರಾತ್ರಿ ಸ್ನೇಹಿತೆಯರಿಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಅಜಯ್ ಹಾಗೂ ಆದಿತ್ಯ, ಅತ್ಯಾಚಾರ ಎಸಗಿದ್ದರು. ಮರುದಿನ ಸ್ನೇಹಿತೆಯರು, ಕ್ಯಾಬ್‌ನಲ್ಲಿ ಮನೆಗೆ ಹೋಗಿದ್ದರು. ಮನೆಯವರಿಗೆ ವಿಷಯ ತಿಳಿಸಿ, ನಂತರ ಠಾಣೆಗೆ ಬಂದು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT