<p><strong>ಬೆಂಗಳೂರು: </strong>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಸುಗ್ರೀವಾಜ್ಞೆ ಹಾಗೂ ಕಾಯ್ದೆಗಳ ಕುರಿತು ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿಯು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಜನತಾ ಅಧಿವೇಶನ ನಡೆಸಿತು.</p>.<p>‘ನಮ್ಮೂರ ಭೂಮಿ, ನಮಗಿರಲಿ’ ವೇದಿಕೆಯ ವಿ. ಗಾಯತ್ರಿ, ‘ಜಲಾಶಯ ಗಳಿಗೆ, ಸರ್ಕಾರಿ ಯೋಜನೆಗಳಿಗೆ, ಕೈಗಾರಿಕೆಗಳಿಗೆ ಹಾಗೂ ಮತ್ತಿತರ ಉದ್ದೇಶಗಳಿಗೆ ಈಗಾಗಲೇ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದೆ. ಹೊಸ ಕಾಯ್ದೆ ಗಳಿಂದ ಅವರು ಮತ್ತೆಂದೂ ಭೂಮಿ ಪಡೆಯಲಾರರು’ ಎಂದರು.</p>.<p>‘ದಲಿತರ ಜಮೀನನ್ನು ಮಾರಬಾರದು. ಮಾರಿದರೂ ಅವುಗ ಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಖರೀದಿಸಿದ ಭೂಮಿ ಯನ್ನು ಹಲವು ವರ್ಷ ಖಾಲಿ ಬಿಡುವ ಬಂಡವಾಳಶಾಹಿಗಳು ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳಲಿದ್ದಾರೆ’ ಎಂದರು.</p>.<p>ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, ‘ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ’ ಎಂದರು.</p>.<p>ಕಾಂಗ್ರೆಸ್ ಮುಖಂಡ ಬಿ.ಆರ್. ಪಾಟೀಲ, ‘ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಕೆಲವರ ಪಾಲಾಗಲಿವೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ರೈತ ಸಂಘದ ರಮೇಶ್ ಹೂಗಾರ್, ‘ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ಪರೋಕ್ಷವಾಗಿ ರೈತರಿಗೆ ಅನ್ಯಾಯವಾಗಲಿದೆ.ರೈತರ ಪಂಪ್ ಸೆಟ್ಗಳಿಗೆ ಈಗ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಮುಂದೆ, ರೈತರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ವಿದ್ಯುತ್ ಖರೀದಿಸಬೇಕಾಗುತ್ತದೆ’ ಎಂದರು.</p>.<p class="Subhead"><strong>ರೈತರು ವಶಕ್ಕೆ: </strong>ವಿಧಾನಸಭೆಯಲ್ಲಿ ಎಪಿಎಂಸಿ ಮಸೂದೆ ಮಂಡನೆಯಾಗುತ್ತಿದ್ದಂತೆ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಪರಿಸ್ಥಿತಿ ಕೈಮೀರುವ ಸೂಚನೆ ಸಿಗುತ್ತಿದ್ದಂತೆ, ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ 32 ರೈತರನ್ನು ವಶಕ್ಕೆ ಪಡೆದರು. ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಸುಗ್ರೀವಾಜ್ಞೆ ಹಾಗೂ ಕಾಯ್ದೆಗಳ ಕುರಿತು ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿಯು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಜನತಾ ಅಧಿವೇಶನ ನಡೆಸಿತು.</p>.<p>‘ನಮ್ಮೂರ ಭೂಮಿ, ನಮಗಿರಲಿ’ ವೇದಿಕೆಯ ವಿ. ಗಾಯತ್ರಿ, ‘ಜಲಾಶಯ ಗಳಿಗೆ, ಸರ್ಕಾರಿ ಯೋಜನೆಗಳಿಗೆ, ಕೈಗಾರಿಕೆಗಳಿಗೆ ಹಾಗೂ ಮತ್ತಿತರ ಉದ್ದೇಶಗಳಿಗೆ ಈಗಾಗಲೇ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದೆ. ಹೊಸ ಕಾಯ್ದೆ ಗಳಿಂದ ಅವರು ಮತ್ತೆಂದೂ ಭೂಮಿ ಪಡೆಯಲಾರರು’ ಎಂದರು.</p>.<p>‘ದಲಿತರ ಜಮೀನನ್ನು ಮಾರಬಾರದು. ಮಾರಿದರೂ ಅವುಗ ಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಖರೀದಿಸಿದ ಭೂಮಿ ಯನ್ನು ಹಲವು ವರ್ಷ ಖಾಲಿ ಬಿಡುವ ಬಂಡವಾಳಶಾಹಿಗಳು ಕಪ್ಪು ಹಣವನ್ನು ಬಿಳಿ ಮಾಡಿಕೊಳ್ಳಲಿದ್ದಾರೆ’ ಎಂದರು.</p>.<p>ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, ‘ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ’ ಎಂದರು.</p>.<p>ಕಾಂಗ್ರೆಸ್ ಮುಖಂಡ ಬಿ.ಆರ್. ಪಾಟೀಲ, ‘ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಕೆಲವರ ಪಾಲಾಗಲಿವೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ರೈತ ಸಂಘದ ರಮೇಶ್ ಹೂಗಾರ್, ‘ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ಪರೋಕ್ಷವಾಗಿ ರೈತರಿಗೆ ಅನ್ಯಾಯವಾಗಲಿದೆ.ರೈತರ ಪಂಪ್ ಸೆಟ್ಗಳಿಗೆ ಈಗ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಮುಂದೆ, ರೈತರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ವಿದ್ಯುತ್ ಖರೀದಿಸಬೇಕಾಗುತ್ತದೆ’ ಎಂದರು.</p>.<p class="Subhead"><strong>ರೈತರು ವಶಕ್ಕೆ: </strong>ವಿಧಾನಸಭೆಯಲ್ಲಿ ಎಪಿಎಂಸಿ ಮಸೂದೆ ಮಂಡನೆಯಾಗುತ್ತಿದ್ದಂತೆ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಪರಿಸ್ಥಿತಿ ಕೈಮೀರುವ ಸೂಚನೆ ಸಿಗುತ್ತಿದ್ದಂತೆ, ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ 32 ರೈತರನ್ನು ವಶಕ್ಕೆ ಪಡೆದರು. ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>