ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ಹನೀಫ್, ‘ಶಾಲೆ–ಕಾಲೇಜುಗಳಲ್ಲಿ ವಿಧಿಸಿದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಶಿರವಸ್ತ್ರ ಹಾಕಿಕೊಂಡು ಕೂರದಿದ್ದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ. ಹಿಜಾಬ್ ಸೇರಿದಂತೆ ಇನ್ನಿತರ ವಿಷಯಗಳನ್ನು ರಾಜಕಾರಣಿಗಳು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಇಂತಹ ವಿಷಯಗಳ ಕುರಿತು ಪ್ರತಿಷ್ಠಾನ ಜಾಗೃತಿ ಮೂಡಿಸಲಿದೆ’ ಎಂದು ತಿಳಿಸಿದರು.