<p><strong>ಬೆಂಗಳೂರು: </strong>ಮೈಸೂರು ರಸ್ತೆಯ ಬಹುತೇಕ ಕಡೆ ಬಿದ್ದಿರುವ ಗುಂಡಿಗಳನ್ನು ಸಂಚಾರ ಪೊಲೀಸರೇ ಮುಚ್ಚಿಸಿದ್ದು, ಇದಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಪೊಲೀಸರನ್ನು ನೋಡಿ, ಬಿಬಿಎಂಪಿ ಅಧಿಕಾರಿಗಳು ಕಲಿಯಬೇಕು’ ಎಂದು ಜನ ಪಾಠ ಹೇಳಿದ್ದಾರೆ.</p>.<p>ರಸ್ತೆಯಲ್ಲಿರುವ ಗುಂಡಿಯಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಜೊತೆಗೆ, ವಾಹನಗಳು ನಿಧಾನವಾಗಿ ಸಂಚರಿಸುತ್ತಿದ್ದರಿಂದ ದಟ್ಟಣೆಯೂ ಉಂಟಾಗುತ್ತಿದೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದು, ದಟ್ಟಣೆ ನಿಯಂತ್ರಿಸಲು ಪೊಲೀಸರೂ ಪರದಾಡುತ್ತಿದ್ದಾರೆ.</p>.<p>ಗುಂಡಿಗಳ ಸಮೀಕ್ಷೆ ಮಾಡಿ ಬಿಬಿಎಂಪಿ ಅಧಿಕಾರಿಗಳಿಗೆ ಪೊಲೀಸರು ಈಗಾಗಲೇ ವರದಿ ನೀಡಿದ್ದಾರೆ. ಇಷ್ಟಾದರೂ ಅಧಿಕಾರಿಗಳು, ಗುಂಡಿ ಮುಚ್ಚಿಸಲು ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಪೊಲೀಸರೇ ರಸ್ತೆಗೆ ಇಳಿದು ಗುಂಡಿಗಳನ್ನು ಮುಚ್ಚಿಸಿದರು.</p>.<p>ಜಲ್ಲಿ ಮಿಶ್ರಿತ ಸಿಮೆಂಟ್ನ್ನು ಟ್ರ್ಯಾಕ್ಟರ್ನಲ್ಲಿ ತರಿಸಿದ್ದ ಪೊಲೀಸರು, ಗುಂಡಿ ಇರುವ ಜಾಗದಲ್ಲಿ ಹಾಕಿಸಿದರು. ಕೂಲಿ ಕಾರ್ಮಿಕರು, ಗುಂಡಿ ಜಾಗವನ್ನು ಸಮದಟ್ಟು ಮಾಡಿದರು.</p>.<p>ಪೊಲೀಸರು ಗುಂಡಿ ಮುಚ್ಚಿರುವ ಫೋಟೊವನ್ನು ಬೆಂಗಳೂರು ಸಂಚಾರ ವಿಭಾಗದ (ಪಶ್ಚಿಮ) ಡಿಸಿಪಿ ಕುಲದೀಪ್ ಕುಮಾರ್ ಜೈನ್, ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>‘ಸುಗಮ ಸಂಚಾರಕ್ಕಾಗಿ ಕೆಲಸ ಮಾಡುವ ಪೊಲೀಸರು, ಇದೀಗ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ. ನಾವೆಲ್ಲರೂ ಬಿಬಿಎಂಪಿಗೆ ತೆರಿಗೆ ಕಟ್ಟುವುದನ್ನು ನಿಲ್ಲಿಸೋಣ. ಅದೇ ಹಣವನ್ನು ಪೊಲೀಸರಿಗೆ ನೀಡೋಣ’ ಎಂದು ಸಾರ್ವಜನಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.</p>.<p>ಮತ್ತೊಬ್ಬರು, ‘ಜನರ ನಡುವೆಯೇ ಇರುವ ಪೊಲೀಸರು, ರಸ್ತೆಗೆ ಇಳಿದು ಗುಂಡಿ ಮುಚ್ಚುತ್ತಿದ್ದಾರೆ. ಎ.ಸಿ ಕಚೇರಿಯಲ್ಲಿ ಕುಳಿತಿರುವ ಬಿಬಿಎಂಪಿ ಅಧಿಕಾರಿಗಳಿಗೆ ನಾಚಿಕೆ ಆಗಬೇಕು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮೈಸೂರು ರಸ್ತೆಯ ಬಹುತೇಕ ಕಡೆ ಬಿದ್ದಿರುವ ಗುಂಡಿಗಳನ್ನು ಸಂಚಾರ ಪೊಲೀಸರೇ ಮುಚ್ಚಿಸಿದ್ದು, ಇದಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಪೊಲೀಸರನ್ನು ನೋಡಿ, ಬಿಬಿಎಂಪಿ ಅಧಿಕಾರಿಗಳು ಕಲಿಯಬೇಕು’ ಎಂದು ಜನ ಪಾಠ ಹೇಳಿದ್ದಾರೆ.</p>.<p>ರಸ್ತೆಯಲ್ಲಿರುವ ಗುಂಡಿಯಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ. ಜೊತೆಗೆ, ವಾಹನಗಳು ನಿಧಾನವಾಗಿ ಸಂಚರಿಸುತ್ತಿದ್ದರಿಂದ ದಟ್ಟಣೆಯೂ ಉಂಟಾಗುತ್ತಿದೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದು, ದಟ್ಟಣೆ ನಿಯಂತ್ರಿಸಲು ಪೊಲೀಸರೂ ಪರದಾಡುತ್ತಿದ್ದಾರೆ.</p>.<p>ಗುಂಡಿಗಳ ಸಮೀಕ್ಷೆ ಮಾಡಿ ಬಿಬಿಎಂಪಿ ಅಧಿಕಾರಿಗಳಿಗೆ ಪೊಲೀಸರು ಈಗಾಗಲೇ ವರದಿ ನೀಡಿದ್ದಾರೆ. ಇಷ್ಟಾದರೂ ಅಧಿಕಾರಿಗಳು, ಗುಂಡಿ ಮುಚ್ಚಿಸಲು ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಪೊಲೀಸರೇ ರಸ್ತೆಗೆ ಇಳಿದು ಗುಂಡಿಗಳನ್ನು ಮುಚ್ಚಿಸಿದರು.</p>.<p>ಜಲ್ಲಿ ಮಿಶ್ರಿತ ಸಿಮೆಂಟ್ನ್ನು ಟ್ರ್ಯಾಕ್ಟರ್ನಲ್ಲಿ ತರಿಸಿದ್ದ ಪೊಲೀಸರು, ಗುಂಡಿ ಇರುವ ಜಾಗದಲ್ಲಿ ಹಾಕಿಸಿದರು. ಕೂಲಿ ಕಾರ್ಮಿಕರು, ಗುಂಡಿ ಜಾಗವನ್ನು ಸಮದಟ್ಟು ಮಾಡಿದರು.</p>.<p>ಪೊಲೀಸರು ಗುಂಡಿ ಮುಚ್ಚಿರುವ ಫೋಟೊವನ್ನು ಬೆಂಗಳೂರು ಸಂಚಾರ ವಿಭಾಗದ (ಪಶ್ಚಿಮ) ಡಿಸಿಪಿ ಕುಲದೀಪ್ ಕುಮಾರ್ ಜೈನ್, ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>‘ಸುಗಮ ಸಂಚಾರಕ್ಕಾಗಿ ಕೆಲಸ ಮಾಡುವ ಪೊಲೀಸರು, ಇದೀಗ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ. ನಾವೆಲ್ಲರೂ ಬಿಬಿಎಂಪಿಗೆ ತೆರಿಗೆ ಕಟ್ಟುವುದನ್ನು ನಿಲ್ಲಿಸೋಣ. ಅದೇ ಹಣವನ್ನು ಪೊಲೀಸರಿಗೆ ನೀಡೋಣ’ ಎಂದು ಸಾರ್ವಜನಿಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.</p>.<p>ಮತ್ತೊಬ್ಬರು, ‘ಜನರ ನಡುವೆಯೇ ಇರುವ ಪೊಲೀಸರು, ರಸ್ತೆಗೆ ಇಳಿದು ಗುಂಡಿ ಮುಚ್ಚುತ್ತಿದ್ದಾರೆ. ಎ.ಸಿ ಕಚೇರಿಯಲ್ಲಿ ಕುಳಿತಿರುವ ಬಿಬಿಎಂಪಿ ಅಧಿಕಾರಿಗಳಿಗೆ ನಾಚಿಕೆ ಆಗಬೇಕು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>