<p><strong>ಬೆಂಗಳೂರು: </strong>ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಜಗದೀಶ್ (29) ಎಂಬುವರನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೋಡಿಚಿಕ್ಕನಹಳ್ಳಿಯ ವಿಜಯಶ್ರೀ ಲೇಔಟ್ ನಿವಾಸಿ ಜಗದೀಶ್, ತಮ್ಮ ತಂದೆ ಧನಪಾಲ್ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ವಿಚಾರವಾಗಿ ಗಲಾಟೆ ಮಾಡಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಆಸ್ಪತ್ರೆಯ ಆಸ್ಪತ್ರೆ ಆಡಳಿತಾಧಿಕಾರಿ ಪ್ರವೀಣ್ ವಾಲಿ ದೂರು ನೀಡಿದ್ದರು’ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.</p>.<p>‘ಕೋವಿಡ್ನಿಂದ ಗುಣಮುಖರಾಗಿದ್ದ ಧನಪಾಲ್ ಕಪ್ಪು ಶೀಲಿಂದ್ರ ರೋಗಕ್ಕೆ ತುತ್ತಾಗಿದ್ದರು. ಅದರ ಚಿಕಿತ್ಸೆಗಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಆಸ್ಪತ್ರೆಗೆ ಬಂದಿದ್ದ ಜಗದೀಶ್ ಹಾಗೂ ಅವರ ತಾಯಿ, ವೈದ್ಯ ಪದ್ಮಕುಮಾರ್ ಹಾಗೂ ಶುಶ್ರೂಷಕಿ ಮಾಲಾ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ’ ಎಂದೂ ತಿಳಿಸಿದರು.</p>.<p>‘ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಆಸ್ಪತ್ರೆಗಳ ಹಾನಿ ತಡೆ ಕಾಯ್ದೆ 2009 ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ಜಗದೀಶ್ (29) ಎಂಬುವರನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೋಡಿಚಿಕ್ಕನಹಳ್ಳಿಯ ವಿಜಯಶ್ರೀ ಲೇಔಟ್ ನಿವಾಸಿ ಜಗದೀಶ್, ತಮ್ಮ ತಂದೆ ಧನಪಾಲ್ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ವಿಚಾರವಾಗಿ ಗಲಾಟೆ ಮಾಡಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಆಸ್ಪತ್ರೆಯ ಆಸ್ಪತ್ರೆ ಆಡಳಿತಾಧಿಕಾರಿ ಪ್ರವೀಣ್ ವಾಲಿ ದೂರು ನೀಡಿದ್ದರು’ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.</p>.<p>‘ಕೋವಿಡ್ನಿಂದ ಗುಣಮುಖರಾಗಿದ್ದ ಧನಪಾಲ್ ಕಪ್ಪು ಶೀಲಿಂದ್ರ ರೋಗಕ್ಕೆ ತುತ್ತಾಗಿದ್ದರು. ಅದರ ಚಿಕಿತ್ಸೆಗಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಆಸ್ಪತ್ರೆಗೆ ಬಂದಿದ್ದ ಜಗದೀಶ್ ಹಾಗೂ ಅವರ ತಾಯಿ, ವೈದ್ಯ ಪದ್ಮಕುಮಾರ್ ಹಾಗೂ ಶುಶ್ರೂಷಕಿ ಮಾಲಾ ಮೇಲೆ ಹಲ್ಲೆ ಮಾಡಿದ್ದರು ಎನ್ನಲಾಗಿದೆ’ ಎಂದೂ ತಿಳಿಸಿದರು.</p>.<p>‘ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಆಸ್ಪತ್ರೆಗಳ ಹಾನಿ ತಡೆ ಕಾಯ್ದೆ 2009 ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>