ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ‘ಈ ರೀತಿ ವಿಶೇಷ ಆಹ್ವಾನಿತರನ್ನು ಕರೆಯಲು ರಾಷ್ಟ್ರೀಯ ಕಾನೂನು ಶಾಲೆಯ ಬೈ–ಲಾದಲ್ಲಿ ಅವಕಾಶವಿಲ್ಲ. ಆದ್ದರಿಂದ ಕುಲಾಧಿಪತಿಗಳೂ ಆದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ತಕ್ಷಣ ಗಮನ ಹರಿಸಬೇಕು’ ಎಂದು ಒತ್ತಾಯಿಸಿದ್ದಾರೆ.