<p><strong>ಬೆಂಗಳೂರು:</strong> ಪೌರಕಾರ್ಮಿಕರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಬಿಬಿಎಂಪಿ ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿವೆ. ಪೌರಕಾರ್ಮಿಕರು ಕೋವಿಡ್ಗೆ ಬಲಿಯಾಗುತ್ತಿದ್ದರೂ ಅವರಿಗೆ ಕನಿಷ್ಠಪಕ್ಷ ಚಿಕಿತ್ಸೆ ಕೊಡಿಸುವ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಆರೋಪಿಸಿ ಪೌರಕಾರ್ಮಿಕರು ಪುಲಿಕೇಶಿನಗರದಲ್ಲಿ ಸೋಮವಾರ ಧರಣಿ ನಡೆಸಿದರು.</p>.<p>ಮಾದಿಗ ದಂಡೋರಾ ಹಾಗೂ ಬಿಬಿಎಂಪಿಯ ಪೌರಕಾರ್ಮಿಕರ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪೌರಕಾರ್ಮಿಕರು ಪುಲಿಕೇಶಿನಗರದ ಬಿಬಿಎಂಪಿ ಕಚೇರಿಯಿಂದ ರಾಬರ್ಟ್ಸನ್ ರಸ್ತೆ ಬಳಿಯ ಕೋವಿಡ್ ವಾರ್ ರೂಂ ವರೆಗೆ ಮೆರವಣಿಗೆ ನಡೆಸಿದರು.</p>.<p>‘ಕೋವಿಡ್ ಸೋಂಕಿತರಾಗುತ್ತಿರುವ ಪೌರಕಾರ್ಮಿಕರ ಹಾಗೂ ದಲಿತ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದುವರೆಗೆ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ನಮ್ಮವರ ಆರೋಗ್ಯ ರಕ್ಷಣೆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.</p>.<p>ಕೋವಿಡ್ ಪೀಡಿತ ಪೌರಕಾರ್ಮಿಕರ ಚಿಕಿತ್ಸೆ ಸಲುವಾಗಿ ವೆಂಟಿಲೇಟರ್ ಸೌಲಭ್ಯ ಇರುವ 200 ಹಾಸಿಗೆಗಳನ್ನು ಕಾಯ್ದಿರಿಸಬೇಕು. ಅವರ ಕೆಲಸದ ಅವಧಿಯನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>‘ಪೌರಕಾರ್ಮಿಕೆ ಪುಷ್ಪಾ ಹಾಗೂ ಬಿಬಿಎಂಪಿ ಅಟೆಂಡರ್ ರಘುವೇಲು ಅವರು ವೆಂಟಿಲೇಟರ್ ಸೌಲಭ್ಯ ಸಿಗದೆ ಕೊನೆಯುಸಿರೆಳೆದರು. ಇನ್ನಾದರೂ ಬಿಬಿಎಂಪಿ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು’ ಎಂದು ಮಾದಿಗ ದಂಡೋರಾ ಬೆಂಗಳೂರು ನಗರದ ಘಟಕದ ಅಧ್ಯಕ್ಷ ಸಿ.ದಾಸ್ ಒತ್ತಾಯಿಸಿದರು.</p>.<p>ಪೌರಕಾರ್ಮಿಕ ಸಂಘಟನೆಗಳ ಮುಖಂಡರಾದ ಡಾ.ಬಾಬು, ದಲಿತ ಸಂಘಟನೆಗಳ ಮುಖಂಡರಾದ ಶೇಖರ್, ರಾಜೇಂದ್ರ, ಲಕ್ಷ್ಮಣ್, ಮದಿ, ಪ್ರೇಮ್ ಕುಮಾರ್ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೌರಕಾರ್ಮಿಕರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಬಿಬಿಎಂಪಿ ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸಿವೆ. ಪೌರಕಾರ್ಮಿಕರು ಕೋವಿಡ್ಗೆ ಬಲಿಯಾಗುತ್ತಿದ್ದರೂ ಅವರಿಗೆ ಕನಿಷ್ಠಪಕ್ಷ ಚಿಕಿತ್ಸೆ ಕೊಡಿಸುವ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಆರೋಪಿಸಿ ಪೌರಕಾರ್ಮಿಕರು ಪುಲಿಕೇಶಿನಗರದಲ್ಲಿ ಸೋಮವಾರ ಧರಣಿ ನಡೆಸಿದರು.</p>.<p>ಮಾದಿಗ ದಂಡೋರಾ ಹಾಗೂ ಬಿಬಿಎಂಪಿಯ ಪೌರಕಾರ್ಮಿಕರ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪೌರಕಾರ್ಮಿಕರು ಪುಲಿಕೇಶಿನಗರದ ಬಿಬಿಎಂಪಿ ಕಚೇರಿಯಿಂದ ರಾಬರ್ಟ್ಸನ್ ರಸ್ತೆ ಬಳಿಯ ಕೋವಿಡ್ ವಾರ್ ರೂಂ ವರೆಗೆ ಮೆರವಣಿಗೆ ನಡೆಸಿದರು.</p>.<p>‘ಕೋವಿಡ್ ಸೋಂಕಿತರಾಗುತ್ತಿರುವ ಪೌರಕಾರ್ಮಿಕರ ಹಾಗೂ ದಲಿತ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದುವರೆಗೆ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ನಮ್ಮವರ ಆರೋಗ್ಯ ರಕ್ಷಣೆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.</p>.<p>ಕೋವಿಡ್ ಪೀಡಿತ ಪೌರಕಾರ್ಮಿಕರ ಚಿಕಿತ್ಸೆ ಸಲುವಾಗಿ ವೆಂಟಿಲೇಟರ್ ಸೌಲಭ್ಯ ಇರುವ 200 ಹಾಸಿಗೆಗಳನ್ನು ಕಾಯ್ದಿರಿಸಬೇಕು. ಅವರ ಕೆಲಸದ ಅವಧಿಯನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>‘ಪೌರಕಾರ್ಮಿಕೆ ಪುಷ್ಪಾ ಹಾಗೂ ಬಿಬಿಎಂಪಿ ಅಟೆಂಡರ್ ರಘುವೇಲು ಅವರು ವೆಂಟಿಲೇಟರ್ ಸೌಲಭ್ಯ ಸಿಗದೆ ಕೊನೆಯುಸಿರೆಳೆದರು. ಇನ್ನಾದರೂ ಬಿಬಿಎಂಪಿ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು’ ಎಂದು ಮಾದಿಗ ದಂಡೋರಾ ಬೆಂಗಳೂರು ನಗರದ ಘಟಕದ ಅಧ್ಯಕ್ಷ ಸಿ.ದಾಸ್ ಒತ್ತಾಯಿಸಿದರು.</p>.<p>ಪೌರಕಾರ್ಮಿಕ ಸಂಘಟನೆಗಳ ಮುಖಂಡರಾದ ಡಾ.ಬಾಬು, ದಲಿತ ಸಂಘಟನೆಗಳ ಮುಖಂಡರಾದ ಶೇಖರ್, ರಾಜೇಂದ್ರ, ಲಕ್ಷ್ಮಣ್, ಮದಿ, ಪ್ರೇಮ್ ಕುಮಾರ್ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>