<p><strong>ಬೆಂಗಳೂರು:</strong> ಬಿಬಿಎಂಪಿ ಗುತ್ತಿಗೆದಾರರಿಗೆ ಪಾವತಿಸಿರುವ ಬಿಲ್ ಮೊತ್ತದಲ್ಲಿ ಹಿಡಿದಿಟ್ಟುಕೊಂಡಿರುವ ಶೇ 25ರಷ್ಟು ಮೊತ್ತವನ್ನು 10 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.</p> <p>ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಎಂ. ನಂದಕುಮಾರ್ ಅವರ ನೇತೃತ್ವದಲ್ಲಿ ಗುತ್ತಿಗೆದಾರರು ಶನಿವಾರ ರಾತ್ರಿ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಕೂಡಲೇ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿದರು.</p><p>ಸಂಘದ ಪದಾಧಿಕಾರಿಗಳಾದ ಚೇತನ್ ಕುಮಾರ್, ಚಿಕ್ಕ ಹೊಂಬಯ್ಯ, ಕೆ.ಶ್ರೀನಿವಾಸ್, ವೆಂಕಟೇಶ್ ರೆಡ್ಡಿ, ವಿ.ಮಯೂರ, ವಿ.ಎಚ್.ರಂಗಸ್ವಾಮಿ, ಪ್ರಕಾಶ್, ಬಿ.ರಂಗನಾಥ್, ಕಾಂತರಾಜು, ಎನ್.ಜಿ.ವಿ.ಪಾಟೀಲ್ ಅವರು ಉಪಸ್ಥಿತರಿದ್ದರು.</p><p>'ಉಪಮುಖ್ಯಮತ್ರಿಯವರ ಭರವಸೆಯಂತೆ 10 ದಿನ ಕಾಯಲಾಗುತ್ತದೆ. ನಂತರ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು’ ಎಂದು ಸಂಘದ ಅಧ್ಯಕ್ಷ ನಂದಕುಮಾರ್ ಅವರುತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಗುತ್ತಿಗೆದಾರರಿಗೆ ಪಾವತಿಸಿರುವ ಬಿಲ್ ಮೊತ್ತದಲ್ಲಿ ಹಿಡಿದಿಟ್ಟುಕೊಂಡಿರುವ ಶೇ 25ರಷ್ಟು ಮೊತ್ತವನ್ನು 10 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.</p> <p>ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಎಂ. ನಂದಕುಮಾರ್ ಅವರ ನೇತೃತ್ವದಲ್ಲಿ ಗುತ್ತಿಗೆದಾರರು ಶನಿವಾರ ರಾತ್ರಿ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಕೂಡಲೇ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿದರು.</p><p>ಸಂಘದ ಪದಾಧಿಕಾರಿಗಳಾದ ಚೇತನ್ ಕುಮಾರ್, ಚಿಕ್ಕ ಹೊಂಬಯ್ಯ, ಕೆ.ಶ್ರೀನಿವಾಸ್, ವೆಂಕಟೇಶ್ ರೆಡ್ಡಿ, ವಿ.ಮಯೂರ, ವಿ.ಎಚ್.ರಂಗಸ್ವಾಮಿ, ಪ್ರಕಾಶ್, ಬಿ.ರಂಗನಾಥ್, ಕಾಂತರಾಜು, ಎನ್.ಜಿ.ವಿ.ಪಾಟೀಲ್ ಅವರು ಉಪಸ್ಥಿತರಿದ್ದರು.</p><p>'ಉಪಮುಖ್ಯಮತ್ರಿಯವರ ಭರವಸೆಯಂತೆ 10 ದಿನ ಕಾಯಲಾಗುತ್ತದೆ. ನಂತರ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು’ ಎಂದು ಸಂಘದ ಅಧ್ಯಕ್ಷ ನಂದಕುಮಾರ್ ಅವರುತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>