'ಜಲಮಂಡಳಿ ಕಾಮಗಾರಿಯಿಂದ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ರಸ್ತೆಗಳು ತೀರಾ ಹದಗೆಟ್ಟಿವೆ. ವ್ಯಾಪಾರಕ್ಕೆ ಹೆಸರುವಾಸಿಯಾಗಿರುವ ಈ ಪ್ರದೇಶದಿಂದ ಸರ್ಕಾರಕ್ಕೆ ಹೆಚ್ಚು ತೆರಿಗೆಯೂ ಸಿಗುತ್ತದೆ. ಆದರೆ, ಇಲ್ಲಿನ ರಸ್ತೆ ಸಮಸ್ಯೆಯಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ತುರ್ತಾಗಿ ಈ ವ್ಯಾಪ್ತಿಯ ಸುಲ್ತಾನ್ಪೇಟೆ, ಹಳೇ ತರಗುಪೇಟೆ, ಬಳೇಪೇಟೆ, ಅಕ್ಕಿಪೇಟೆ ಹಾಗೂ ಇನ್ನಿತರ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡಬೇಕು' ಎಂದು ಕೋರಿದ್ದಾರೆ.