ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆಯಾಗಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಮಾರ್ಗ ಮಧ್ಯದಲ್ಲೇ ವಾಹನ ಬದಲಿಸಿ ಕಾಳಸಂತೆಗೆ ಸಾಗಿಸಲು ಯತ್ನಿಸುತ್ತಿದ್ದ ಪ್ರಕರಣ ಪತ್ತೆಹಚ್ಚಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ರಾಜ್ಯಮಟ್ಟದ ಜಾಗೃತ ದಳ, ನಾಲ್ಕು ಲಾರಿ, 50 ಚೀಲ ಅಕ್ಕಿ ಹಾಗೂ 300 ಕ್ವಿಂಟಲ್ ರಾಗಿಯನ್ನು ವಶಪಡಿಸಿಕೊಂಡಿದೆ.