ಬೆಂಗಳೂರು: ಮಂಗಳವಾರ ರಾತ್ರಿ ಗುಂಪಿನೊಂದಿಗೆ ನಗರಕ್ಕೆ ಬಂದಿದ್ದ ನವೀಲೊಂದು ಅಪಘಾತದಲ್ಲಿ ಮೃತಪಟ್ಟಿದೆ.
ತುಮಕೂರು ರಸ್ತೆಯ ಪೀಣ್ಯ ಬಳಿಯ ಮೇಲ್ಸೇತುವೆಯಲ್ಲಿ ಅಪರಿಚಿತ ವಾಹನವೊಂದು ಗುದ್ದಿದ್ದರಿಂದಾಗಿ ನವಿಲು ಸ್ಥಳದಲ್ಲೇ ಮೃತಪಟ್ಟಿದೆ. ಈ ಸಂಬಂಧ ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮೇಲ್ಸೇತುವೆಯಲ್ಲೇ ನವಿಲು ಸತ್ತು ಬಿದ್ದಿತ್ತು. ಅದನ್ನು ಗಮನಿಸಿದ್ದ ಸ್ಥಳೀಯರು ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಜತೆಗೆ ಸ್ಥಳಕ್ಕೆ ಹೋಗಿ ನವೀಲನ್ನು ಸ್ಥಳಾಂತರಿಸಿದೆವು’ ಎಂದು ಪೊಲೀಸರು ಹೇಳಿದರು.