ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಲಾರಿ ಡಿಕ್ಕಿ: ಪಾದಚಾರಿ ಸಾವು

Last Updated 20 ಜನವರಿ 2022, 16:42 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಕ್ರೀಟ್‌ ಮಿಶ್ರಣ ಮಾಡುವ ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ‍ಪ್ರಕರಣ ದಾಖಲಾಗಿದೆ.

‘ಮೃತ ವ್ಯಕ್ತಿಯು ಉತ್ತರ ಪ್ರದೇಶ ಮೂಲದವರು ಎಂದು ಹೇಳಲಾಗಿದೆ. ಅವರ ಹೆಸರು ಹಾಗೂ ವಿಳಾಸ ಗೊತ್ತಾಗಿಲ್ಲ. ಲಾರಿ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.

‘ರಘುವನಹಳ್ಳಿ ಬಳಿ ಓಡಾಡುತ್ತಿದ್ದ ವ್ಯಕ್ತಿಯನ್ನು ಗುರುವಾರ ‘ಸ್ವಿಗ್ಗಿ’ ಡೆಲಿವರಿ ಬಾಯ್‌ ನೋಡಿ ವಿಚಾರಿಸಿದ್ದಾರೆ. ಆಹಾರ ನೀಡಿ ಉಪಚರಿಸಿ ಹೋಗಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೃತ ವ್ಯಕ್ತಿಯು ರಘುವನಹಳ್ಳಿಯ 80 ಅಡಿ ರಸ್ತೆ ಸಮೀಪದ ಹಳ್ಳಿ ತೋಟ ಬಳಿ ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT