<p><strong>ಬೆಂಗಳೂರು</strong>: ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ನಾಲ್ಕು ಕಾರುಗಳು ಜಖಂಗೊಂಡಿದ್ದು, ಪಾದಚಾರಿಯೊಬ್ಬರು ಗಾಯಗೊಂಡಿದ್ದಾರೆ.</p>.<p>ಪಾದಚಾರಿ ಅಮೀರ್ ಪಟೇಲ್ (53) ಎಂಬುವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.</p>.<p><strong>ಏನಿದು ಘಟನೆ?: </strong>ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಗರದಿಂದ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಚಿಕ್ಕಜಾಲ ಮೇಲ್ಸೇತುವೆಯಲ್ಲಿ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದರು. ಇದೇ ಮಾರ್ಗದಲ್ಲಿ ನಾಲ್ಕು ಕಾರುಗಳು ಒಂದೇ ವೇಗದಲ್ಲಿ ಬರುತ್ತಿದ್ದವು. ಆಗ ಮುಂಭಾಗ ಹೋಗುತ್ತಿದ್ದ ಕಾರಿನ ಚಾಲಕ ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಾರಿನ ಬ್ರೇಕ್ ಹಾಕಿದ್ದರು. ಅದೇ ವೇಳೆ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿದ್ದರಿಂದ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪಾದಚಾರಿ ಗಾಯಗೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ನಾಲ್ಕು ಕಾರುಗಳು ಜಖಂಗೊಂಡಿದ್ದು, ಪಾದಚಾರಿಯೊಬ್ಬರು ಗಾಯಗೊಂಡಿದ್ದಾರೆ.</p>.<p>ಪಾದಚಾರಿ ಅಮೀರ್ ಪಟೇಲ್ (53) ಎಂಬುವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಕಾರು ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.</p>.<p><strong>ಏನಿದು ಘಟನೆ?: </strong>ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಗರದಿಂದ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಚಿಕ್ಕಜಾಲ ಮೇಲ್ಸೇತುವೆಯಲ್ಲಿ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದರು. ಇದೇ ಮಾರ್ಗದಲ್ಲಿ ನಾಲ್ಕು ಕಾರುಗಳು ಒಂದೇ ವೇಗದಲ್ಲಿ ಬರುತ್ತಿದ್ದವು. ಆಗ ಮುಂಭಾಗ ಹೋಗುತ್ತಿದ್ದ ಕಾರಿನ ಚಾಲಕ ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಾರಿನ ಬ್ರೇಕ್ ಹಾಕಿದ್ದರು. ಅದೇ ವೇಳೆ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿದ್ದರಿಂದ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪಾದಚಾರಿ ಗಾಯಗೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>