ಏನಿದು ಘಟನೆ?: ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಗರದಿಂದ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಚಿಕ್ಕಜಾಲ ಮೇಲ್ಸೇತುವೆಯಲ್ಲಿ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದರು. ಇದೇ ಮಾರ್ಗದಲ್ಲಿ ನಾಲ್ಕು ಕಾರುಗಳು ಒಂದೇ ವೇಗದಲ್ಲಿ ಬರುತ್ತಿದ್ದವು. ಆಗ ಮುಂಭಾಗ ಹೋಗುತ್ತಿದ್ದ ಕಾರಿನ ಚಾಲಕ ಪಾದಚಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಾರಿನ ಬ್ರೇಕ್ ಹಾಕಿದ್ದರು. ಅದೇ ವೇಳೆ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿದ್ದರಿಂದ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪಾದಚಾರಿ ಗಾಯಗೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.