<p><strong>ಪೀಣ್ಯ ದಾಸರಹಳ್ಳಿ: </strong>'ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸುಧಾರಣೆ ತಂದು ದೇಶದಲ್ಲೇ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ರಾಜ್ಯ ಎಂಬಂತೆ ಮಾಡುವ ಪ್ರಯತ್ನ ನಡೆದಿದೆ' ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.</p>.<p>ಬಾಗಲಗುಂಟೆಯ ಕೋವಿಡ್ ಸಹಾಯವಾಣಿ ಕೇಂದ್ರಕ್ಕೆ ಆಮ್ಲಜನಕ ಸಾಂದ್ರಕಗಳನ್ನು ವಿತರಿಸಿ ಮಾತನಾಡಿದರು.</p>.<p>'ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಸುಧಾರಣೆಯಾಗಿ ಕ್ರಾಂತಿಕಾರಿ ಪರಿಣಾಮ ಬೀರಿದೆ. ನಮ್ಮ ದೇಶದಲ್ಲಿ ವ್ಯಾಕ್ಸಿನ್ ತಯಾರಿಕೆ ಮಾಡಿ 23 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ’ ಎಂದರು.</p>.<p>‘ಈಗಾಗಲೇ ಬಿಜೆಪಿ ಸರ್ಕಾರವು ದಾಸರಹಳ್ಳಿ ಕ್ಷೇತ್ರಕ್ಕೆ ಸರ್ಕಾರಿ ಪದವಿ ಕಾಲೇಜು ನೀಡಿದೆ. ಅದರಂತೆಯೇ 100 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ, ‘ಸೇವಾ ಸಪ್ತಾಹ ಎಂಬ ಸಾಮಾಜಿಕ ಸೇವೆ ಅಡಿಯಲ್ಲಿ ಮುಖಂಡರು ಪ್ರತಿನಿತ್ಯ ಬಡವರ ಹಾಗೂ ಕೋವಿಡ್ ರೋಗಿಗಳ ಸೇವೆ ಮಾಡುತ್ತಿದ್ದಾರೆ’ ಎಂದರು.</p>.<p>ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಲೋಕೇಶ್ ಅವರು ಬಾಗಲಗುಂಟೆ ಪೊಲೀಸ್ ಠಾಣೆಗೆ ಸುಮಾರು ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡವನ್ನು ಅಶ್ವತ್ಥ ನಾರಾಯಣ ವೀಕ್ಷಿಸಿದರು. ಬಳಿಕ ದಾಸರಹಳ್ಳಿ ಆರೋಗ್ಯ ಕೇಂದ್ರಕ್ಕೆ ತೆರಳಿ ಆಸ್ಪತ್ರೆ ಸಿಬ್ಬಂದಿಗೆ ಊಟ ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ಬಿಜೆಪಿ ಪ್ರಧಾನಕಾರ್ಯದರ್ಶಿಗಳಾದ ಟಿ.ಶಿವಕುಮಾರ್, ಪಿ.ಎಚ್.ರಾಜು, ವಿನೋದ್ ಗೌಡ, ಬಿಜೆಪಿ ಮುಖಂಡರಾದ ನಾಗಣ್ಣ, ಕೃಷ್ಣಮೂರ್ತಿ, ರವಿಗೌಡ, ಸಂದೀಪ್ ಸಿಂಗ್, ಎಸಿಪಿ ಶ್ರೀನಿವಾಸ್ ರೆಡ್ಡಿ, ಇನ್ಸ್ಪೆಕ್ಟರ್ ಸುನೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ: </strong>'ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸುಧಾರಣೆ ತಂದು ದೇಶದಲ್ಲೇ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ರಾಜ್ಯ ಎಂಬಂತೆ ಮಾಡುವ ಪ್ರಯತ್ನ ನಡೆದಿದೆ' ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.</p>.<p>ಬಾಗಲಗುಂಟೆಯ ಕೋವಿಡ್ ಸಹಾಯವಾಣಿ ಕೇಂದ್ರಕ್ಕೆ ಆಮ್ಲಜನಕ ಸಾಂದ್ರಕಗಳನ್ನು ವಿತರಿಸಿ ಮಾತನಾಡಿದರು.</p>.<p>'ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಸುಧಾರಣೆಯಾಗಿ ಕ್ರಾಂತಿಕಾರಿ ಪರಿಣಾಮ ಬೀರಿದೆ. ನಮ್ಮ ದೇಶದಲ್ಲಿ ವ್ಯಾಕ್ಸಿನ್ ತಯಾರಿಕೆ ಮಾಡಿ 23 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ’ ಎಂದರು.</p>.<p>‘ಈಗಾಗಲೇ ಬಿಜೆಪಿ ಸರ್ಕಾರವು ದಾಸರಹಳ್ಳಿ ಕ್ಷೇತ್ರಕ್ಕೆ ಸರ್ಕಾರಿ ಪದವಿ ಕಾಲೇಜು ನೀಡಿದೆ. ಅದರಂತೆಯೇ 100 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಮಾಜಿ ಶಾಸಕ ಎಸ್. ಮುನಿರಾಜು ಮಾತನಾಡಿ, ‘ಸೇವಾ ಸಪ್ತಾಹ ಎಂಬ ಸಾಮಾಜಿಕ ಸೇವೆ ಅಡಿಯಲ್ಲಿ ಮುಖಂಡರು ಪ್ರತಿನಿತ್ಯ ಬಡವರ ಹಾಗೂ ಕೋವಿಡ್ ರೋಗಿಗಳ ಸೇವೆ ಮಾಡುತ್ತಿದ್ದಾರೆ’ ಎಂದರು.</p>.<p>ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಲೋಕೇಶ್ ಅವರು ಬಾಗಲಗುಂಟೆ ಪೊಲೀಸ್ ಠಾಣೆಗೆ ಸುಮಾರು ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡವನ್ನು ಅಶ್ವತ್ಥ ನಾರಾಯಣ ವೀಕ್ಷಿಸಿದರು. ಬಳಿಕ ದಾಸರಹಳ್ಳಿ ಆರೋಗ್ಯ ಕೇಂದ್ರಕ್ಕೆ ತೆರಳಿ ಆಸ್ಪತ್ರೆ ಸಿಬ್ಬಂದಿಗೆ ಊಟ ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ಬಿಜೆಪಿ ಪ್ರಧಾನಕಾರ್ಯದರ್ಶಿಗಳಾದ ಟಿ.ಶಿವಕುಮಾರ್, ಪಿ.ಎಚ್.ರಾಜು, ವಿನೋದ್ ಗೌಡ, ಬಿಜೆಪಿ ಮುಖಂಡರಾದ ನಾಗಣ್ಣ, ಕೃಷ್ಣಮೂರ್ತಿ, ರವಿಗೌಡ, ಸಂದೀಪ್ ಸಿಂಗ್, ಎಸಿಪಿ ಶ್ರೀನಿವಾಸ್ ರೆಡ್ಡಿ, ಇನ್ಸ್ಪೆಕ್ಟರ್ ಸುನೀಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>