ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀಣ್ಯದಾಸರಹಳ್ಳಿ: ಅವೈಜ್ಞಾನಿಕ ರಸ್ತೆ ಉಬ್ಬು ತೆರವು

Last Updated 27 ಅಕ್ಟೋಬರ್ 2018, 19:16 IST
ಅಕ್ಷರ ಗಾತ್ರ

ಬೆಂಗಳೂರು: ಪೀಣ್ಯದಾಸರಹಳ್ಳಿ ಸಮೀಪ ಚೊಕ್ಕಸಂದ್ರದ ನಾರಾಯಣಪುರದಲ್ಲಿ ಮೂರು ಕಡೆ ಅವೈಜ್ಞಾನಿಕವಾಗಿ ಹಾಕಲಾಗಿದ್ದ ರಸ್ತೆ ಉಬ್ಬನ್ನು ಶನಿವಾರ ತೆರವುಗೊಳಿಸಲಾಯಿತು.

ಈ ಕುರಿತು ಶನಿವಾರ ‘ಪ್ರಜಾವಾಣಿ’ ಸುದ್ದಿ ಪ್ರಕಟಿಸಿತ್ತು. ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಧರ್ಮಪ್ಪ ಮತ್ತು ಎಂಜಿನಿಯರ್ ಚಿತ್ತಯ್ಯ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಟ್ರ್ಯಾಕ್ಟರ್‌ ಹಾಗೂ ಜೆಸಿಬಿ ಮೂಲಕ ಉಬ್ಬನ್ನು ತೆರವುಗೊಳಿಸಲಾಯಿತು.

ಸ್ಥಳೀಯರು ತೆರವು ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದರು. ಎಂಜಿನಿಯರ್‌ ಚಿತ್ತಯ್ಯ ಅವರು ಸಾರ್ವಜನಿಕರನ್ನು ಸಮಾಧಾನಪಡಿಸಿದರು. ‘ಉಬ್ಬನ್ನು ಹಾಕಲು ಕೆಲವು ನಿಯಮಗಳು ಇವೆ. ವಾಹನ ಸವಾರರಿಗೆ ತೊಂದರೆಯಾಗದಂತೆ ವೈಜ್ಞಾನಿಕವಾಗಿ ಹಾಕಲು ಅನುಮತಿ ಕೊಡಿಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT