<p><strong>ದಾಸರಹಳ್ಳಿ:</strong> ಅಬ್ಬಿಗೆರೆಯಿಂದ ಚಿಕ್ಕಬಾಣಾವರ ನಡುವಿನ ಮುಖ್ಯ ರಸ್ತೆ ವಿಸ್ತರಣೆಗಾಗಿ ಮರಗಳನ್ನು ಕಡಿಯಬಾರದು ಎಂದು ಅಬ್ಬಿಗೆರೆ ಶಾಲಾ ವಿದ್ಯಾರ್ಥಿಗಳು ಮರಗಳನ್ನು ತಬ್ಬಿಕೊಳ್ಳುವ ಮೂಲಕ (ಅಪ್ಪಿಕೊ ಚಳವಳಿ) ಪ್ರತಿಭಟನೆ ನಡೆಸಿದರು.</p>.<p>ಬಿಬಿಎಂಪಿಯ ಶೆಟ್ಟಿಹಳ್ಳಿ ವಾರ್ಡ್ನ ವ್ಯಾಪ್ತಿಯಲ್ಲಿರುವ ಅಬ್ಬಿಗೆರೆ ಸರ್ಕಾರಿ ಶಾಲೆಯ ಆವರಣದಲ್ಲಿನ ಮರಗಳನ್ನು ಕಡಿಯಲು ಬಿಬಿಎಂಪಿ ಸಿಬ್ಬಂದಿ ಮುಂದಾದಾಗ ಮರಗಳನ್ನು ಅಪ್ಪಿಕೊಂಡ ವಿದ್ಯಾರ್ಥಿಗಳು ಅವುಗಳನ್ನು ಕಡಿಯದಂತೆ ತಡೆದರು. ಶಾಲಾ ಮಕ್ಕಳಿಗಾಗಿ ಮೀಸಲಿಟ್ಟಿರುವ ಮೈದಾನವನ್ನು ಯಾವುದೇ ಕಾರಣಕ್ಕೂ ರಸ್ತೆ ಅಭಿವೃದ್ಧಿಗೆ ಬಳಸಬಾರದು ಎಂದು ಒತ್ತಾಯಿಸಿದರು.</p>.<p>‘ಶಾಲೆ ಆವರಣದಲ್ಲಿ ನೂರಾರು ಮರಗಳಿವೆ. ನಮ್ಮ ಹಿರಿಯ ವಿದ್ಯಾರ್ಥಿಗಳು ಮೈಲು ದೂರದಿಂದ ನೀರು ಹೊತ್ತು ತಂದು ಇವುಗಳನ್ನು ಬೆಳೆಸಿದ್ದಾರೆ. ಈಗ ರಸ್ತೆ ವಿಸ್ತರಣೆಗಾಗಿ ಅವುಗಳನ್ನು ಕಡಿಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಬೇಕು’ ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.</p>.<p>‘ಶಾಲಾ ಆವರಣದಲ್ಲಿರುವ ಮರಗಳನ್ನು ತೆರವುಗೊಳಿಸುವ ಕುರಿತು ಶಿಕ್ಷಣ ಇಲಾಖೆಯಾಗಲಿ ಅಥವಾ ಅರಣ್ಯ ಇಲಾಖೆಯಾಗಲಿ ಯಾವುದೇ ಸೂಚನೆ ಅಥವಾ ನೋಟಿಸ್ ನೀಡಿಲ್ಲ’ ಎಂದು ಶಿಕ್ಷಕರು ತಿಳಿಸಿದರು.</p>.<p>‘ಈ ಬಗ್ಗೆ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಿದರೂ ಯಾವುದೇ ಸ್ಪಂದನೆ ನೀಡಲಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಸರಹಳ್ಳಿ:</strong> ಅಬ್ಬಿಗೆರೆಯಿಂದ ಚಿಕ್ಕಬಾಣಾವರ ನಡುವಿನ ಮುಖ್ಯ ರಸ್ತೆ ವಿಸ್ತರಣೆಗಾಗಿ ಮರಗಳನ್ನು ಕಡಿಯಬಾರದು ಎಂದು ಅಬ್ಬಿಗೆರೆ ಶಾಲಾ ವಿದ್ಯಾರ್ಥಿಗಳು ಮರಗಳನ್ನು ತಬ್ಬಿಕೊಳ್ಳುವ ಮೂಲಕ (ಅಪ್ಪಿಕೊ ಚಳವಳಿ) ಪ್ರತಿಭಟನೆ ನಡೆಸಿದರು.</p>.<p>ಬಿಬಿಎಂಪಿಯ ಶೆಟ್ಟಿಹಳ್ಳಿ ವಾರ್ಡ್ನ ವ್ಯಾಪ್ತಿಯಲ್ಲಿರುವ ಅಬ್ಬಿಗೆರೆ ಸರ್ಕಾರಿ ಶಾಲೆಯ ಆವರಣದಲ್ಲಿನ ಮರಗಳನ್ನು ಕಡಿಯಲು ಬಿಬಿಎಂಪಿ ಸಿಬ್ಬಂದಿ ಮುಂದಾದಾಗ ಮರಗಳನ್ನು ಅಪ್ಪಿಕೊಂಡ ವಿದ್ಯಾರ್ಥಿಗಳು ಅವುಗಳನ್ನು ಕಡಿಯದಂತೆ ತಡೆದರು. ಶಾಲಾ ಮಕ್ಕಳಿಗಾಗಿ ಮೀಸಲಿಟ್ಟಿರುವ ಮೈದಾನವನ್ನು ಯಾವುದೇ ಕಾರಣಕ್ಕೂ ರಸ್ತೆ ಅಭಿವೃದ್ಧಿಗೆ ಬಳಸಬಾರದು ಎಂದು ಒತ್ತಾಯಿಸಿದರು.</p>.<p>‘ಶಾಲೆ ಆವರಣದಲ್ಲಿ ನೂರಾರು ಮರಗಳಿವೆ. ನಮ್ಮ ಹಿರಿಯ ವಿದ್ಯಾರ್ಥಿಗಳು ಮೈಲು ದೂರದಿಂದ ನೀರು ಹೊತ್ತು ತಂದು ಇವುಗಳನ್ನು ಬೆಳೆಸಿದ್ದಾರೆ. ಈಗ ರಸ್ತೆ ವಿಸ್ತರಣೆಗಾಗಿ ಅವುಗಳನ್ನು ಕಡಿಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಬೇಕು’ ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.</p>.<p>‘ಶಾಲಾ ಆವರಣದಲ್ಲಿರುವ ಮರಗಳನ್ನು ತೆರವುಗೊಳಿಸುವ ಕುರಿತು ಶಿಕ್ಷಣ ಇಲಾಖೆಯಾಗಲಿ ಅಥವಾ ಅರಣ್ಯ ಇಲಾಖೆಯಾಗಲಿ ಯಾವುದೇ ಸೂಚನೆ ಅಥವಾ ನೋಟಿಸ್ ನೀಡಿಲ್ಲ’ ಎಂದು ಶಿಕ್ಷಕರು ತಿಳಿಸಿದರು.</p>.<p>‘ಈ ಬಗ್ಗೆ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಿದರೂ ಯಾವುದೇ ಸ್ಪಂದನೆ ನೀಡಲಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>