<p><strong>ಪೀಣ್ಯ ದಾಸರಹಳ್ಳಿ:</strong> ಹಾವನೂರು ಬಡಾವಣೆಯ ಅಸೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ 'ಅಸೆಂಟ್ ಕನ್ನಡ ಕಲರವ -2025' ಎಂಬ ಶೀರ್ಷಿಕೆಯಡಿ ಎರಡು ದಿನಗಳ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಬಿ.ಎಂ. ವೆಂಕಟೇಶ್ ತಿಳಿಸಿದರು.</p>.<p>ಶಾಸಕ ಎಸ್. ಮುನಿರಾಜು ಅವರು ನ. 28ರ ಬೆಳಿಗ್ಗೆ 8:30ಕ್ಕೆ ಕನ್ನಡ ಧ್ವಜಾರೋಹಣ ಮಾಡಿ ಕಲಾತಂಡಗಳ ಜಾಥಾಕ್ಕೆ ಚಾಲನೆ ನೀಡುವರು. ಮಧ್ಯಾಹ್ನ 2 ಕ್ಕೆ ನಟ ಹೊನ್ನವಳ್ಳಿ ಕೃಷ್ಣ, ಸಾಹಿತಿ ಕಾಳೇಗೌಡ ನಾಗವಾರ, ಕಿರುತೆರೆ ನಟಿ ಪುನೀತ ಗೌಡ, ಪ್ರಾಧ್ಯಾಪಕ ಜಯಶಂಕರ್ ಹಲಗೂರು ಭಾಗವಹಿಸುವರು.</p>.<p>ನ.29ರ ಬೆಳಿಗ್ಗೆ 9ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಯುವ ಕವಿಗೋಷ್ಠಿ ಆಯೋಜಿಸಲಾಗಿದೆ. ಭೂಮಿಕಾ ಸೇವಾ ಫೌಂಡೇಶನ್ ಅಧ್ಯಕ್ಷೆ ಲತಾ ಕುಂದರಗಿ ಅಧ್ಯಕ್ಷತೆ ವಹಿಸುವರು. ರಾಜೇಂದ್ರ ಕೊಣ್ಣೂರ, ಎನ್.ಡಿ. ಕೃಷ್ಣಮೂರ್ತಿ ಉಪಸ್ಥಿತರಿರುವರು. ವಿದ್ಯಾರ್ಥಿಗಳಿಂದ ನೃತ್ಯ, ಹಾಡಿನ ಕಾರ್ಯಕ್ರಮ ಇರಲಿವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಹಾವನೂರು ಬಡಾವಣೆಯ ಅಸೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ 'ಅಸೆಂಟ್ ಕನ್ನಡ ಕಲರವ -2025' ಎಂಬ ಶೀರ್ಷಿಕೆಯಡಿ ಎರಡು ದಿನಗಳ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಬಿ.ಎಂ. ವೆಂಕಟೇಶ್ ತಿಳಿಸಿದರು.</p>.<p>ಶಾಸಕ ಎಸ್. ಮುನಿರಾಜು ಅವರು ನ. 28ರ ಬೆಳಿಗ್ಗೆ 8:30ಕ್ಕೆ ಕನ್ನಡ ಧ್ವಜಾರೋಹಣ ಮಾಡಿ ಕಲಾತಂಡಗಳ ಜಾಥಾಕ್ಕೆ ಚಾಲನೆ ನೀಡುವರು. ಮಧ್ಯಾಹ್ನ 2 ಕ್ಕೆ ನಟ ಹೊನ್ನವಳ್ಳಿ ಕೃಷ್ಣ, ಸಾಹಿತಿ ಕಾಳೇಗೌಡ ನಾಗವಾರ, ಕಿರುತೆರೆ ನಟಿ ಪುನೀತ ಗೌಡ, ಪ್ರಾಧ್ಯಾಪಕ ಜಯಶಂಕರ್ ಹಲಗೂರು ಭಾಗವಹಿಸುವರು.</p>.<p>ನ.29ರ ಬೆಳಿಗ್ಗೆ 9ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಯುವ ಕವಿಗೋಷ್ಠಿ ಆಯೋಜಿಸಲಾಗಿದೆ. ಭೂಮಿಕಾ ಸೇವಾ ಫೌಂಡೇಶನ್ ಅಧ್ಯಕ್ಷೆ ಲತಾ ಕುಂದರಗಿ ಅಧ್ಯಕ್ಷತೆ ವಹಿಸುವರು. ರಾಜೇಂದ್ರ ಕೊಣ್ಣೂರ, ಎನ್.ಡಿ. ಕೃಷ್ಣಮೂರ್ತಿ ಉಪಸ್ಥಿತರಿರುವರು. ವಿದ್ಯಾರ್ಥಿಗಳಿಂದ ನೃತ್ಯ, ಹಾಡಿನ ಕಾರ್ಯಕ್ರಮ ಇರಲಿವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>