<p><strong>ಪೀಣ್ಯದಾಸರಹಳ್ಳಿ</strong>: ಪ್ರತಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಕ್ಕೆ ಬೆಂಬಲ ನೀಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಅಡಿ 5 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಕೆಲಸ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬಾಗಲಗುಂಟೆ ಎಂಇಐ ಆಟದ ಮೈದಾನದಲ್ಲಿ ಸ್ವದೇಶಿ ಜಾಗರಣ ಮಂಚ್-ಕರ್ನಾಟಕ ಆಯೋಜಿಸಿರುವ 5 ದಿನಗಳ ಸ್ವದೇಶಿ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>ಲಾಂಡ್ರಿ, ಸಲೂನ್, ಕಾರ್ಪೆಂಟರ್ ಸೇರಿ ದುಡಿಮೆದಾರರಿಗೆ ಕಾಯಕ ಯೋಜನೆ ಜಾರಿಗೆ ತರಲಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಆತ್ಮನಿರ್ಭರ ಯೋಜನೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.</p>.<p>‘ಭಾರತೀಯ ಸಂಸ್ಕೃತಿ ಗಟ್ಟಿಯಾಗಿ ಪ್ರತಿಪಾದಿಸುವ ಸ್ವದೇಶಿ ಜಾಗರಣ ಮಂಚ್ ಇದಾಗಿದೆ. 130 ಕೋಟಿ ಜನಸಂಖ್ಯೆಯುಳ್ಳ ಭಾರತೀಯ ಮಾರುಕಟ್ಟೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಜತೆಗೆ ಭಾರತ, ಈಗ ವಿಶ್ವದಲ್ಲೇ ಹೆಚ್ಚು ರಫ್ತು ಮಾಡುವ ದೇಶ ಎಂಬ ಖ್ಯಾತಿಗೆ ಪಾತ್ರವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯದಾಸರಹಳ್ಳಿ</strong>: ಪ್ರತಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಕ್ಕೆ ಬೆಂಬಲ ನೀಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಅಡಿ 5 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಕೆಲಸ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಬಾಗಲಗುಂಟೆ ಎಂಇಐ ಆಟದ ಮೈದಾನದಲ್ಲಿ ಸ್ವದೇಶಿ ಜಾಗರಣ ಮಂಚ್-ಕರ್ನಾಟಕ ಆಯೋಜಿಸಿರುವ 5 ದಿನಗಳ ಸ್ವದೇಶಿ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>ಲಾಂಡ್ರಿ, ಸಲೂನ್, ಕಾರ್ಪೆಂಟರ್ ಸೇರಿ ದುಡಿಮೆದಾರರಿಗೆ ಕಾಯಕ ಯೋಜನೆ ಜಾರಿಗೆ ತರಲಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಆತ್ಮನಿರ್ಭರ ಯೋಜನೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.</p>.<p>‘ಭಾರತೀಯ ಸಂಸ್ಕೃತಿ ಗಟ್ಟಿಯಾಗಿ ಪ್ರತಿಪಾದಿಸುವ ಸ್ವದೇಶಿ ಜಾಗರಣ ಮಂಚ್ ಇದಾಗಿದೆ. 130 ಕೋಟಿ ಜನಸಂಖ್ಯೆಯುಳ್ಳ ಭಾರತೀಯ ಮಾರುಕಟ್ಟೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಜತೆಗೆ ಭಾರತ, ಈಗ ವಿಶ್ವದಲ್ಲೇ ಹೆಚ್ಚು ರಫ್ತು ಮಾಡುವ ದೇಶ ಎಂಬ ಖ್ಯಾತಿಗೆ ಪಾತ್ರವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>