<p><strong>ಕೆ.ಆರ್.ಪುರ:</strong> ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಟಿಬದ್ಧವಾಗಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಪೂರ್ವ ವಲಯದ ವ್ಯಾಪ್ತಿಯಲ್ಲಿ ಕೋವಿಡ್–19 ಸಂಬಂಧಿತ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಹಕಾರದಿಂದಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಚಿಕಿತ್ಸೆ ನೀಡಲು ಶ್ರಮಿಸಲಾಗುತ್ತಿದೆ. ಯಾವುದೇ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ’ ಎಂದರು.</p>.<p>‘ನಾಗವಾರದ ಡಾ.ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗಾಗಿ 500 ಹಾಸಿಗೆ ವ್ಯವಸ್ಥೆ ಮಾಡುವುದರ ಜೊತೆಗೆ, ನಗರದ 300 ಕ್ಕೂ ಹೆಚ್ಚು ಆಂಬುಲೆನ್ಸ್ಗಳನ್ನು ಸೋಂಕಿತರ ಚಿಕಿತ್ಸೆಗೆ ಬಳಸಲು ಪ್ರಯತ್ನಿಸಲಾಗುತ್ತಿದೆ’ಎಂದು ತಿಳಿಸಿದರು.</p>.<p>‘ಕೋವಿಡ್ ವಾರ್ ರೂಮ್ನಲ್ಲಿ ಕ್ಷೇತ್ರದ ಚಿತ್ರಣ ದೊರಕುವಂತಾಗಬೇಕು. ಹಿರಿಯ ಅಧಿಕಾರಿಗಳು ಸಮಸ್ಯೆ ಇರುವುದನ್ನು ಗಮನಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸರ್ವಜ್ಞನಗರ, ಶಿವಾಜಿನಗರ, ಶಾಂತಿನಗರ ವಿಧಾನ ಸಭಾ ಕ್ಷೇತ್ರಗಳ ಕೋವಿಡ್ ಆಸ್ಪತ್ರೆ ವಾರ್ ರೂಂ ಹಾಗೂ ಫೀವರ್ ಕ್ಲಿನಿಕ್ ಗಳ ಸ್ಥಳ ಪರಿಶೀಲನೆ ನಡೆಸಿದರು.</p>.<p class="Subhead"><strong>ಆಸ್ಪತ್ರೆಗೆ ಮೀಸಲಿಡಲು ಮನವಿ: </strong>‘ಅಂಬೇಡ್ಕರ್ ಕಾಲೇಜಿನಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯದ ವ್ಯವಸ್ಥೆ ಮಾಡಬೇಕು’ ಎಂದು ಶಾಸಕ ಕೆ.ಜೆ. ಜಾರ್ಜ್ ಹೇಳಿದರು.</p>.<p>ನಾಗವಾರದ ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಹಾಗೂ ಕೆ.ಜಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಫೀವರ್ ಕ್ಲಿನಿಕ್, ಎಚ್.ಬಿ.ಆರ್ ಬಡಾವಣೆಯ ರಾಮಮಂದಿರ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಆಸ್ಪತ್ರೆ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರಮೇಶ್ ಗೌಡ, ಪಾಲಿಕೆ ಸದಸ್ಯರಾದ, ಪದ್ಮನಾಭ ರೆಡ್ಡಿ ನಂದಾ, ವಸಂತ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಟಿಬದ್ಧವಾಗಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ ಪೂರ್ವ ವಲಯದ ವ್ಯಾಪ್ತಿಯಲ್ಲಿ ಕೋವಿಡ್–19 ಸಂಬಂಧಿತ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಹಕಾರದಿಂದಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಚಿಕಿತ್ಸೆ ನೀಡಲು ಶ್ರಮಿಸಲಾಗುತ್ತಿದೆ. ಯಾವುದೇ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಉಂಟಾಗದಂತೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ’ ಎಂದರು.</p>.<p>‘ನಾಗವಾರದ ಡಾ.ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗಾಗಿ 500 ಹಾಸಿಗೆ ವ್ಯವಸ್ಥೆ ಮಾಡುವುದರ ಜೊತೆಗೆ, ನಗರದ 300 ಕ್ಕೂ ಹೆಚ್ಚು ಆಂಬುಲೆನ್ಸ್ಗಳನ್ನು ಸೋಂಕಿತರ ಚಿಕಿತ್ಸೆಗೆ ಬಳಸಲು ಪ್ರಯತ್ನಿಸಲಾಗುತ್ತಿದೆ’ಎಂದು ತಿಳಿಸಿದರು.</p>.<p>‘ಕೋವಿಡ್ ವಾರ್ ರೂಮ್ನಲ್ಲಿ ಕ್ಷೇತ್ರದ ಚಿತ್ರಣ ದೊರಕುವಂತಾಗಬೇಕು. ಹಿರಿಯ ಅಧಿಕಾರಿಗಳು ಸಮಸ್ಯೆ ಇರುವುದನ್ನು ಗಮನಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಸರ್ವಜ್ಞನಗರ, ಶಿವಾಜಿನಗರ, ಶಾಂತಿನಗರ ವಿಧಾನ ಸಭಾ ಕ್ಷೇತ್ರಗಳ ಕೋವಿಡ್ ಆಸ್ಪತ್ರೆ ವಾರ್ ರೂಂ ಹಾಗೂ ಫೀವರ್ ಕ್ಲಿನಿಕ್ ಗಳ ಸ್ಥಳ ಪರಿಶೀಲನೆ ನಡೆಸಿದರು.</p>.<p class="Subhead"><strong>ಆಸ್ಪತ್ರೆಗೆ ಮೀಸಲಿಡಲು ಮನವಿ: </strong>‘ಅಂಬೇಡ್ಕರ್ ಕಾಲೇಜಿನಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯದ ವ್ಯವಸ್ಥೆ ಮಾಡಬೇಕು’ ಎಂದು ಶಾಸಕ ಕೆ.ಜೆ. ಜಾರ್ಜ್ ಹೇಳಿದರು.</p>.<p>ನಾಗವಾರದ ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಹಾಗೂ ಕೆ.ಜಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಫೀವರ್ ಕ್ಲಿನಿಕ್, ಎಚ್.ಬಿ.ಆರ್ ಬಡಾವಣೆಯ ರಾಮಮಂದಿರ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಆಸ್ಪತ್ರೆ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರಮೇಶ್ ಗೌಡ, ಪಾಲಿಕೆ ಸದಸ್ಯರಾದ, ಪದ್ಮನಾಭ ರೆಡ್ಡಿ ನಂದಾ, ವಸಂತ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>