<p><strong>ಬೆಂಗಳೂರು</strong>: ಐಎಎಸ್, ಐಪಿಎಸ್ ಸಹಿತ ಉನ್ನತ ಸ್ಥಾನಗಳಲ್ಲಿ ಈಡಿಗ ಸಮುದಾಯದವರು ಬಹಳ ಕಡಿಮೆ ಇದ್ದಾರೆ. ಶಿಕ್ಷಣ ಮತ್ತು ಜಾಗೃತಿಗೆ ಮಹತ್ವ ನೀಡಿದರೆ ಸಂಘಟನೆ ಯಶಸ್ವಿಯಾಗುತ್ತದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ತಿಳಿಸಿದರು.</p>.<p>ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘವು ನಾರಾಯಣಗುರು ಜಯಂತಿ ಪ್ರಯುಕ್ತ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ, ರಾಜ್ಯಮಟ್ಟದ ನಾರಾಯಣ ಗುರು ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಆಯಕಟ್ಟಿನ ಸ್ಥಾನಗಳಲ್ಲಿ ಈಡಿಗ ಸಮುದಾಯದವರು ಇರಬೇಕಿದ್ದರೆ ನಮ್ಮ ತಾಯಂದಿರು ಮಕ್ಕಳಿಗೆ ಶಿಕ್ಷಣ ನೀಡಲು ಮುತುವರ್ಜಿ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಗೌರಿಗದ್ದೆ ಸ್ವರ್ಣಪೀಠಿಕಾಪುರ ದತ್ತಾಶ್ರಮದ ವಿನಯ್ ಗುರೂಜಿ ಮಾತನಾಡಿ, ‘ಆಗಿನ ಕಾಲದಲ್ಲಿಯೇ ನಾರಾಯಣ ಗುರುಗಳು ಹೋರಾಟದ ಮೂಲಕ ಮಹಿಳೆಯರಿಗೆ ನ್ಯಾಯ ಒದಗಿಸಿಕೊಟ್ಟಿದ್ದರು. ಶಿವಗಿರಿಯಲ್ಲಿ ಮುಂದಿನ ವರ್ಷನಾರಾಯಣ ಗುರುಗಳ ಜಯಂತ್ಯುತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ್ ಮಾತನಾಡಿ, ‘ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಯಲ್ಲಿರುವ ಈಡಿಗ, ಬಿಲ್ಲವ ಸಮಾಜದ 26 ಉಪ ಪಂಗಡಗಳಿವೆ. ಅವೆಲ್ಲ ಒಂದಾಗಬೇಕು. ಈ ಸಮುದಾಯಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಡವರಿದ್ದಾರೆ. ಸಂಕಷ್ಟದಿಂದ ಜೀವನ ನಡೆಸುತ್ತಿದ್ದಾರೆ. ಅವರನ್ನು ಮೇಲೆತ್ತುವ ಕಾರ್ಯವಾಗಬೇಕು’ ಎಂದು ಹೇಳಿದರು.</p>.<p>ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಮಾತನಾಡಿ, ‘ಮಹಿಳೆಯರು ಶೋಷಣೆಗೆ ಒಳಗಾಗುವುದು ನಿಂತಿಲ್ಲ ಎಂಬುದಕ್ಕೆ ಪ್ರಜ್ವಲ್ ರೇವಣ್ಣ ಪ್ರಕರಣ ಸಹಿತ ಇತ್ತೀಚೆಗೆ ಬೆಳಕಿಗೆ ಬರುತ್ತಿರುವ ಹಲವು ಪ್ರಕರಣಗಳೇ ಸಾಕ್ಷಿ. ಮಹಿಳೆಗೆ ಇನ್ನೂ ಸಮಾನತೆ ಬಂದಿಲ್ಲ’ ಎಂದು ವಿಷಾದಿಸಿದರು.</p>.<p>ಸೋಲೂರು ಆರ್ಯ ಈಡಿಗ ಪೀಠಾಧಿಪತಿ ವಿಖ್ಯಾತಾನಾಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>‘ಉದ್ಯೋಗಸ್ಥ ಮಹಿಳೆಯರಿಗೆ ವಸತಿ’ ಯೋಜನೆಗೆ ಚಾಲನೆ ನೀಡಲಾಯಿತು. ಮಹಿಳಾ ಸಬಲೀಕರಣಕ್ಕಾಗಿ ‘ಆಚಾರದ ಶರಣೆ ಅಕ್ಕಮ್ಮ ಟ್ರಸ್ಟ್’ ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐಎಎಸ್, ಐಪಿಎಸ್ ಸಹಿತ ಉನ್ನತ ಸ್ಥಾನಗಳಲ್ಲಿ ಈಡಿಗ ಸಮುದಾಯದವರು ಬಹಳ ಕಡಿಮೆ ಇದ್ದಾರೆ. ಶಿಕ್ಷಣ ಮತ್ತು ಜಾಗೃತಿಗೆ ಮಹತ್ವ ನೀಡಿದರೆ ಸಂಘಟನೆ ಯಶಸ್ವಿಯಾಗುತ್ತದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ತಿಳಿಸಿದರು.</p>.<p>ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘವು ನಾರಾಯಣಗುರು ಜಯಂತಿ ಪ್ರಯುಕ್ತ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪರಿವರ್ತನಶ್ರೀ ಪ್ರಶಸ್ತಿ ಪ್ರದಾನ, ರಾಜ್ಯಮಟ್ಟದ ನಾರಾಯಣ ಗುರು ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಆಯಕಟ್ಟಿನ ಸ್ಥಾನಗಳಲ್ಲಿ ಈಡಿಗ ಸಮುದಾಯದವರು ಇರಬೇಕಿದ್ದರೆ ನಮ್ಮ ತಾಯಂದಿರು ಮಕ್ಕಳಿಗೆ ಶಿಕ್ಷಣ ನೀಡಲು ಮುತುವರ್ಜಿ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>ಗೌರಿಗದ್ದೆ ಸ್ವರ್ಣಪೀಠಿಕಾಪುರ ದತ್ತಾಶ್ರಮದ ವಿನಯ್ ಗುರೂಜಿ ಮಾತನಾಡಿ, ‘ಆಗಿನ ಕಾಲದಲ್ಲಿಯೇ ನಾರಾಯಣ ಗುರುಗಳು ಹೋರಾಟದ ಮೂಲಕ ಮಹಿಳೆಯರಿಗೆ ನ್ಯಾಯ ಒದಗಿಸಿಕೊಟ್ಟಿದ್ದರು. ಶಿವಗಿರಿಯಲ್ಲಿ ಮುಂದಿನ ವರ್ಷನಾರಾಯಣ ಗುರುಗಳ ಜಯಂತ್ಯುತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ್ ಮಾತನಾಡಿ, ‘ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಯಲ್ಲಿರುವ ಈಡಿಗ, ಬಿಲ್ಲವ ಸಮಾಜದ 26 ಉಪ ಪಂಗಡಗಳಿವೆ. ಅವೆಲ್ಲ ಒಂದಾಗಬೇಕು. ಈ ಸಮುದಾಯಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಡವರಿದ್ದಾರೆ. ಸಂಕಷ್ಟದಿಂದ ಜೀವನ ನಡೆಸುತ್ತಿದ್ದಾರೆ. ಅವರನ್ನು ಮೇಲೆತ್ತುವ ಕಾರ್ಯವಾಗಬೇಕು’ ಎಂದು ಹೇಳಿದರು.</p>.<p>ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಮಾತನಾಡಿ, ‘ಮಹಿಳೆಯರು ಶೋಷಣೆಗೆ ಒಳಗಾಗುವುದು ನಿಂತಿಲ್ಲ ಎಂಬುದಕ್ಕೆ ಪ್ರಜ್ವಲ್ ರೇವಣ್ಣ ಪ್ರಕರಣ ಸಹಿತ ಇತ್ತೀಚೆಗೆ ಬೆಳಕಿಗೆ ಬರುತ್ತಿರುವ ಹಲವು ಪ್ರಕರಣಗಳೇ ಸಾಕ್ಷಿ. ಮಹಿಳೆಗೆ ಇನ್ನೂ ಸಮಾನತೆ ಬಂದಿಲ್ಲ’ ಎಂದು ವಿಷಾದಿಸಿದರು.</p>.<p>ಸೋಲೂರು ಆರ್ಯ ಈಡಿಗ ಪೀಠಾಧಿಪತಿ ವಿಖ್ಯಾತಾನಾಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>‘ಉದ್ಯೋಗಸ್ಥ ಮಹಿಳೆಯರಿಗೆ ವಸತಿ’ ಯೋಜನೆಗೆ ಚಾಲನೆ ನೀಡಲಾಯಿತು. ಮಹಿಳಾ ಸಬಲೀಕರಣಕ್ಕಾಗಿ ‘ಆಚಾರದ ಶರಣೆ ಅಕ್ಕಮ್ಮ ಟ್ರಸ್ಟ್’ ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>