'ನಮ್ಮ ನಡೆ, ಸ್ವಚ್ಛತೆಯ ಕಡೆ' ಎಂಬ ಗುರಿ ಹಾಗೂ 'ನಮ್ಮ ಕಸ, ನಮ್ಮ ಜವಾಬ್ದಾರಿ' ಎಂಬ ಧ್ಯೇಯವಾಕ್ಯದೊಂದಿಗೆ ಜಾರಿಯಾಗುವ ಈ ಕಾರ್ಯಕ್ರಮಕ್ಕೆ ರಾಜ್ಯ ಮಟ್ಟದ ಕಸ ನಿರ್ವಹಣೆ ಉಸ್ತುವಾರಿ ಸಮಿತಿಯ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ.ಆಡಿ, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಬಿಬಿಎಂಪಿ ಆಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಇದೇ 25ರಂದು ಬೆಳಿಗ್ಗೆ 11ಕ್ಕೆ ಪುರಭವನದ ಬಳಿ ಚಾಲನೆ ನೀಡಲಿದ್ದಾರೆ.