ಬೆಂಗಳೂರು: ಭಾರತಿನಗರ ಠಾಣೆ ವ್ಯಾಪ್ತಿಯಲ್ಲಿ ಮುನೀರ್ (60) ಎಂಬುವರ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿದ್ದ ದುಷ್ಕರ್ಮಿಗಳು, ಅವರ ಬಳಿ ಇದ್ದ ₹ 16.60 ಲಕ್ಷ ಕಿತ್ತು ಪರಾರಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
‘ಬಳ್ಳಾರಿಯ ಮುನೀರ್, ಎಮ್ಮೆಗಳನ್ನು ಮಾರಾಟ ಮಾಡಲು ನಗರಕ್ಕೆ ಬಂದಿದ್ದರು. ಮಾರಾಟದಿಂದ ಬಂದ ಹಣವನ್ನು ತೆಗೆದುಕೊಂಡು ತಮ್ಮೂರಿಗೆ ಹೋಗಲು ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಅದೇ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಮುಖಕ್ಕೆ ಪೆಪ್ಪರ್ ಸ್ಟ್ರೈ ಮಾಡಿದ್ದರಿಂದ ಮುನೀರ್, ರಸ್ತೆಯಲ್ಲೇ ಬಿದ್ದಿದ್ದರು. ಅದೇ ವೇಳೆ ಹಣವಿದ್ದ ಬ್ಯಾಗ್ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಹಣವಿರುವ ಮಾಹಿತಿ ತಿಳಿದವರೇ ಕೃತ್ಯ ಎಸಗಿರುವ ಅನುಮಾನವಿದೆ’ ಎಂದರು.