ಕೆ.ಆರ್.ಪುರ ಹೋಬಳಿ ಬಿದರಹಳ್ಳಿಯಲ್ಲಿ ಎಂಟು ಎಕರೆ ಗುರುತಿಸಲಾಗಿದೆ. ಕಂದಾಯ ಸಚಿವರ ಜತೆ ಚರ್ಚಿಸಿ, ಭೂಮಿ ಪಡೆದು ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ವಸತಿ ಸಮುಚ್ಚಯ ನಿರ್ಮಿಸಲಾಗುವುದು. ಕಾಚರಕನಹಳ್ಳಿ ಕೆರೆ ವ್ಯಾಪ್ತಿ, ಗೋವಿಂದರಾಜ ನಗರದ ವಿನಾಯಕ ಬಡಾವಣೆ, ಉತ್ತರಹಳ್ಳಿಯ ರಸ್ತೆಯ ಕೊಡಿಪಾಳ್ಯ, ದೊಡ್ಡ ಆಲದಮರ ಸಮೀಪದ ಭೀಮನಕುಪ್ಪೆ, ದಾಸರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಬ್ಯಾಟರಾಯನಪುರ ಭಾಗದ ಕೊಳೆಗೇರಿಗಳ ಕುಟುಂಬಗಳನ್ನು ಸ್ಥಳಾಂತರಿಸಲಾಗುವುದು ಎಂದು ಮಾಹಿತಿ ನೀಡಿದರು.