'ಡಿ.ಕೆ.ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ನಮ್ಮದೇನು ಅಭ್ಯಂತರ ಇಲ್ಲ. ಆದರೆ ಹೆಚ್ಚು ಜನ ಸೇರಬಾರದೆಂದು ಹೇಳಿದ್ದೇನೆ. ದೂರವಾಣಿಯಲ್ಲಿ ನಿನ್ನೆ ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ' ಎಂದು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.